BW News Bureau : ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಅಂಗವಾಗಿ ಉತ್ತಮ ಆಡಳಿತ ದಿನ ಆಚರಿಸಲು ನಿರ್ಧರಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಬೆಂಗಳೂರಿನ ಅರ್ಚ್ ಬಿಷಪ್ ಡಾ. ಬರ್ನಾರ್ಡ್ ಮೊರಾಸ್ ವಿರೋಧ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳಿಗೆ ಕಳಿಸಿರುವ ಕ್ರಿಸ್ ಮಸ್ ಶುಭಾಷಯ ಪತ್ರದಲ್ಲಿ, ಕೇಂದ್ರ ಸರ್ಕಾರ ಡಿ.25ರಂದೇ ಉತ್ತಮ ಆಡಳಿತ ದಿನವನ್ನು ಆಚರಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಇದೇ ವೇಳೆ ಮತಾಂತರದ ವಿಷಯದ ಬಗ್ಗೆಯೂ ಮಾತನಾಡಿರುವ ಬೆಂಗಳೂರು ಬರ್ನಾರ್ಡ್ ಮೊರಾಸ್, ನಾವೆಲ್ಲ ಬಲವಂತದ ಮತಾಂತರವನ್ನು ವಿರೋಧಿಸುತ್ತೇವೆ. ಆದರೆ ಓರ್ವ ವ್ಯಕ್ತಿ ತನಗೆ ಇಷ್ಟವಾದ ಧರ್ಮಕ್ಕೆ ಸೇರುವ ಸ್ವಾತಂತ್ರ್ಯ ನಮ್ಮ ದೇಶದ ಸಂವಿಧಾನದಲ್ಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ಮತಾಂತರ ನಿಷೇಧ ಮಸೂದೆ ರೂಪಿಸಲು ಮುಂದಾಗುತ್ತಿರುವುದು ಸಂವಿಧಾನದ ಆಶಯಕ್ಕೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.