ನವದೆಹಲಿ : ದೇಶಾದ್ಯಂತ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಉತ್ತಮ ಆಡಳಿತ ದಿನವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸರ್ಕಾರ ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
ದೇಶದ ಜನತೆಗೆ ಎನ್.ಡಿ.ಎ ಸರ್ಕಾರ ಪಾರದರ್ಶಕ, ಉತ್ತಮ ಆಡಳಿತ ದಿನ ಆಚರಿಸುವುದಾಗಿ ಭರವಸೆ ನೀಡಿತ್ತು. ಈ ಭರವಸೆಯನ್ನು ಎಂದಿಗೂ ಹುಸಿಗೊಳಿಸುವುದಿಲ್ಲ. ಜನರಿಗೆ ನೀಡಿರುವ ಭರವಸೆಯನ್ನು ಈಡೇರಿಸಲು ಸರ್ಕಾರ ಕಳೆದ 7 ತಿಂಗಳಿನಿಂದ ಸರ್ಕಾರದ ಕಾರ್ಯವಿಧಾನದಲ್ಲಿ ಅಗತ್ಯ ಬದಲಾವಣೆ ತರಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ. ಅಲ್ಲದೇ ಸರ್ಕಾರ ಪ್ರಜೆಯೇ ಪ್ರಥಮ(Citizen-First) ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.
ಇಂದು, ನಮ್ಮೆಲ್ಲರ ನೆಚ್ಚಿನ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 90ನೇ ಜನ್ಮದಿನಾಚರಣೆ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಉತ್ತಮ, ಆಡಳಿತ ನೀಡಲು ಬದ್ಧರಾಗಿರಬೇಕು, ಅಟಲ್ ಬಿಹಾರಿಒ ವಾಜಪೇಯಿ ಅವರ ಜನ್ಮದಿನಾಚರಣೆಯಂದು ಉತ್ತಮ ಆಡಳಿತ ನಡೆಸಲು ಸಂಕಲ್ಪ ಕೈಗೊಳ್ಳೋಣ ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳಿಗೂ ಇದೇ ವೇಳೆ ಕರೆ ನೀಡಿದ್ದಾರೆ.