ಬೆಂಗಳೂರು : ರಾಜ್ಯದಲ್ಲಿ ಬಸ್ ಪ್ರಯಾಣ ದರ ಇಳಿಕೆ ಮಾಡುವ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಪ್ರತಿಕ್ರಿಯಿಸಿದ್ದು ಜನವರಿ 1 ರಿಂದ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಪ್ರಯಾಣ ದರ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗ ರೆಡ್ಡಿ, ಡಿಸೇಲ್ ದರ ಕಡಿಮೆಯಾದ ಬೆನ್ನಲ್ಲೇ ಬಿಎಂಟಿಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಪ್ರಯಾಣ ದರವನ್ನು ಕಡಿತಗೊಳಿಸಬೇಕು ಎಂಬ ಬೇಡಿಕೆ ಹೆಚ್ಚಾಗಿತ್ತು. ಹೀಗಾಗಿ ಜನವರಿ 1 ರಿಂದ ನೂತನ ದರ ಜಾರಿಗೆ ಬರಲಿದ್ದು, ಬಸ್ ಪ್ರಯಾಣ ದರ ಇಳಿಕೆ ಮಾಡುವುದಕ್ಕೆ ಸಿಎಂ ಸಿದ್ದರಾಮಯ್ಯ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಶೇ. 3ರಿಂದ 4 ರಷ್ಟು ಇಳಿಕೆ ಆಗಲಿದೆ. ಪ್ರತಿ ಸ್ಟೇಜ್ ಗೆ 1 ರೂ. ಇಳಿಕೆ ಆಗಲಿದೆ ಎಂದು ತಿಳಿದುಬಂದಿದೆ. ಇನ್ನು ಬಿಎಂಟಿಸಿ ದಿನದ ಬಸ್ ಪಾಸ್ ದರದಲ್ಲೂ 5 ರೂ. ಇಳಿಕೆಯಾಗುವ ನಿರೀಕ್ಷೆ ಇದೆ.