ಲಖ್ನೌ : ಎನ್.ಡಿ.ಎ ಸರ್ಕಾರ ರೈಲ್ವೇ ಇಲಾಖೆಯನ್ನು ಖಾಸಗೀಕರಣ ಮಾಡುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.
ಹಿಂದೂ ಬನಾರಸ್ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಾರಣಾಸಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಪ್ರಸ್ತುತ ರೈಲ್ವೆ ಇಲಾಖೆಯು ಹಣಕಾಸಿನ ಕೊರತೆ ಎದುರಿಸುತ್ತಿದೆ. ಆದರೆ ಖಾಸಗೀಕರಣ ಮಾಡುವುದಿಲ್ಲ. ಬದಲಾಗಿ ಇಲಾಖೆಯ ಆರ್ಥಿಕ ಸುಧಾರಣೆಗೆ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ. ರೈಲ್ವೆ ಇಲಾಖೆ ಅಭಿವೃದ್ಧಿಯಾದರೆ ಇಡೀ ದೇಶವೇ ಅಭಿವೃದ್ಧಿಯಾದಂತೆ.
ಅತಿ ಶೀಘ್ರವೇ ಎನ್.ಡಿ.ಎ ಸರ್ಕಾರ ರೈಲ್ವೇ ವಿಶ್ವವಿದ್ಯಾನಿಲಯ, ದೇಶದ ನಾಲ್ಕು ಕಡೆಗಳಲ್ಲಿ ರೈಲ್ವೆ ಸಿಟಿ ಸ್ಥಾಪನೆ ಮಾಡಲಿದೆ ಎಂದು ಮೋದಿ ಹೇಳಿದ್ದಾರೆ.