ಜಾರ್ಖಂಡ್ : 'ಜಾರ್ಖಂಡ್' ನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ರಘುಬರ್ ದಾಸ್ ಆಯ್ಕೆ ಬಹುತೇಕ ಖಚಿತವಾಗಿದೆ.
ಬಿಜೆಪಿ ಶಾಸಕಾಂಗ ನಾಯಕನನ್ನಾಗಿ ರಘುಬರ್ ದಾಸ್ ಆಯ್ಕೆ ನಿಚ್ಚಳವಾಗಿದ್ದು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೇಯೂ ಹೊರಬೀಳಲಿದೆ.
ಬಿಜೆಪಿಗೆ ಜಾರ್ಖಂಡ್ ನಲ್ಲಿ ಸ್ಪಷ್ಟ ಬಹುಮತ ದೊರೆತಿದ್ದು ಸರ್ಕಾರ ರಚಿಸಲಿದೆ. ಚುನಾವಣೆಗೂ ಮುನ್ನ ಬಿಜೆಪಿ, ಆಲ್ ಜಾರ್ಖಂಡ್ ಸ್ಟೂಡೆಂಟ್ಸ್ ಯೂನಿಯನ್ ನೊಂದಿಗೆ ಮೈತ್ರಿ ಮಾಡಿಕೊಂಡಿತ್ತು.
ಈ ಹಿಂದೆ ಜಾರ್ಖಂಡ್ ನಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದ ಸಂದರ್ಭದಲ್ಲಿ ರಘುಬರ್ ದಾಸ್, ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ಪಕ್ಷದ ಅಧ್ಯಕ್ಷರಾಗಿಯೂ ಸಹ ಕಾರ್ಯನಿರ್ವಹಿಸಿದ್ದಾರೆ.
ರಘುಬರ್ ದಾಸ್, ಜಾರ್ಖಂಡ್ ನಲ್ಲಿ ಶೇ.32ರಷ್ಟಿರುವ ಬುಡಗಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಜಾರ್ಖಂಡ್ ನಲ್ಲಿ ಸರ್ಕಾರ ರಚನೆಯಾಗಲಿರುವ ಹಿನ್ನೆಲೆಯಲ್ಲಿ ವೀಕ್ಷಕರಾಗಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡ ಹಾಗೂ ವಿನಯ್ ಸಹಸ್ರಬುದ್ದೆ ನೇಮಕಗೊಂಡಿದ್ದಾರೆ.