ಬಿಹಾರ : 'ಬಿಹಾರ'ದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜಾರ್ಖಂಡ್ ನಲ್ಲಿ ಬುಡಕಟ್ಟು ಜನಾಂಗಕ್ಕೆ ಸೇರದ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿರುವ ಕ್ರಮಕ್ಕೆ ನಿತೀಶ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಾರ್ಖಂಡ್ ರಾಜ್ಯದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರದ ರಘುಬರ್ ದಾಸ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಮೂಲಕ ಬಿಜೆಪಿ ಜಾರ್ಖಂಡ್ ರಾಜ್ಯ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬಂದಿದ್ದ ಪರಂಪರೆಯನ್ನು ಮುರಿದಿದೆ ಎಂದು ನಿತೀಶ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬುಡಕಟ್ಟು ಸಮುದಾಯದ ಹೊರತಾದ ವ್ಯಕ್ತಿಯನ್ನು ಮುಖ್ಯಮಂತ್ರಿಯಾಗಿ ಮಾಡಿರುವುದು ಬಿಜೆಪಿಗೆ ಬುಡಕಟ್ಟು ಜನರಲ್ಲಿ ನಂಬಿಕೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.