ಬೆಂಗಳೂರು : ಬೆಂಗಳೂರು ಚರ್ಚ್ ಸ್ಟ್ರೀಟ್ ನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ನಿಷೇಧಿತ ಉಗ್ರ ಸಂಘಟನೆ ಅಲ್-ಉಮಾ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ.
ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ತಮಿಳುನಾಡಿನ ಹೊಸೂರು, ಕೃಷ್ಣಗಿರಿ ಜಿಲ್ಲೆಗೆ ಭೇಟಿ ನೀಡಿದ್ದು ತನಿಖೆ ಮುಂದುವರೆಸಿದ್ದಾರೆ.
1998ರಲ್ಲಿ ಅಲ್-ಉಮಾ ಉಗ್ರ ಸಂಘಟನೆ ತಮಿಳುನಾಡಿನಲ್ಲಿ ಸ್ಫೋಟ ನಡೆಸಿತ್ತು. ಆ ನಂತರ ಸಂಘಟನೆಯನ್ನು ನಿಷೇಧಿಸಲಾಗಿತ್ತು. ಬೆಂಗಳೂರು ಚರ್ಚ್ ಸ್ಫೋಟದಲ್ಲೂ ಇದೇ ಸಂಘಟನೆ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ತನಿಖಾಧಿಕಾರಿಗಳು ತಮಿಳುನಾಡಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಸ್ಫೋಟ ನಡೆಸುವುದಕ್ಕೂ 4 ಗಂಟೆಗಳ ಮೊದಲು ಬೆಂಗಳೂರಿನಲ್ಲೇ ಬಾಂಬ್ ತಯಾರಿಸಲಾಗಿದೆ ಎಂದು ಎನ್.ಐ.ಎ ಅಧಿಕಾರಿಗಳು ತಿಳಿಸಿದ್ದಾರೆ.