ಮುಂಬೈ : ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಬೈ, ಪುಣೆ, ದೆಹಲಿ, ಕೋಲ್ಕತಾ, ಚೆನ್ನೈ, ಹೈದರಾಬಾದ್ ಸೇರಿದಂತೆ ದೇಶದಾದ್ಯಂತ ಹೈ ಆಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ದಾಳಿಯ ನಂತರ ಮುಂಬೈ ಅನ್ನು ಉಗ್ರರು ಗುರಿಯಾಗಿರಿಸಿಕೊಂಡಿದ್ದಾರೆ. ಸಿಮಿ ಉಗ್ರ ಸಂಘಟನೆ ಮುಂಬೈ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದೆ ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ದೊರೆತಿದೆ.
ಮಧ್ಯಪ್ರದೇಶದ ಖಂಡ್ವಾ ಜೈಲಿಂದ ಪರಾರಿಯಾಗಿದ್ದ ಸಿಮಿ ಸಂಘಟನೆಯ 5 ಉಗ್ರರು ಮತ್ತೆ ದಾಳಿ ನಡೆಸುವ ಸಾಧ್ಯತೆಗಳಿವೆ ಎಂದು ನಂಬಲರ್ಹ ಮೂಲಗಳಿಂದ ಗುಪ್ತಚರ ಇಲಾಖೆಗೆ ಮಾಹಿತಿ ತಲುಪಿದೆ ಎಂದು ಸಿಎನ್ಎನ್-ಐಬಿಎನ್ ವರದಿ ಮಾಡಿದೆ.