ವಿಜಯಪುರ : ತಮ್ಮ ಮೂರು ಪ್ರಮುಖ ಬೇಡಿಕೆಗಳಾದ - ರಾಮಮಂದಿರ ನಿರ್ಮಾಣ, ಏಕರೂಪ ನಾಗರಿಕ ಸಂಹಿತೆ ಮತ್ತು ಮತಾಂತರ ನಿಷೇಧ ಕಾಯ್ದೆ ಇವುಗಳಿಂದ ಹಿನ್ನಡೆಯುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ಸಂಸ್ಥೆಯ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಮಠಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಉಗ್ರವಾಗಿ ಟೀಕಿಸಿದ ತೊಗಾಡಿಯಾ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂಗಳ ವಿರುದ್ಧ ಕೆಲಸ ಮಾಡುತ್ತಿದೆ ಎಂದಿದ್ದಾರೆ.
’ಹಲವಾರು ಧಾರ್ಮಿಕ ಸಂಸ್ಥೆಗಳು ವಿದೇಶದಿಂದ ಹಣ ಪಡೆಯುತ್ತಿವೆ. ಆದರೆ ಹಿಂದೂ ಧಾರ್ಮಿಕ ಸಂಸ್ಥೆಗಳನ್ನಷ್ಟೇ ಗುರಿಯಾಗಿಸಿಕೊಂಡಿರುವುದು ಏಕೆ? ವಿ.ಎಚ್.ಪಿ ಇದನ್ನು ಸಹಿಸುವುದಿಲ್ಲ” ಎಂದಿದ್ದಾರೆ.