Untitled Document
Sign Up | Login    
Dynamic website and Portals
  
December 31, 2014

ಜಮ್ಮು-ಕಾಶ್ಮೀರ: ಮೆಹಬೂಬ ಮುಫ್ತಿಯಿಂದ ರಾಜ್ಯಪಾಲರ ಭೇಟಿ

ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ವಿಚಾರಕ್ಕೆ ಸಂಬಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ರಾಜ್ಯಪಾಲರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಜಮ್ಮು-ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿಯನ್ನು ಸರ್ಕಾರ ರಚನೆ ಸಂಬಂಧ ರಾಜ್ಯಪಾಲ ಎನ್.ಎನ್.ವೊಹ್ರಾ ಅವರು ಆಹ್ವಾನ ನೀಡಿದ್ದರು. ಈ ಹಿನ್ನಲೆಯಲ್ಲಿ ಮೆಹಬೂಬ ಮುಫ್ತಿ ಶ್ರೀನಗರದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಭೇಟಿ ಬಳಿಕ ಮಾತನಾಡಿದ ಅವರು, ಸರ್ಕಾರ ರಚನೆ ಕುರಿತು ಆತುರದ ನಿರ್ಧಾರವಿಲ್ಲ. 55ಕ್ಕೂ ಹೆಚ್ಚು ಶಾಸಕರ ಬೆಂಬಲ ನಮಗಿದೆ ಎಂದು ತಿಳಿಸಿದ್ದಾರೆ.

87 ಸ್ಥಾನಗಳ ವಿಧಾನಸಭೆಯಲ್ಲಿ 28 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಪಿಡಿಪಿ, ಎರಡನೇ ಅತಿ ದೊಡ್ಡ ಪಕ್ಷ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸುವ ಕುರಿತು ಮಾತುಕತೆ ನಡೆಸಿತ್ತು. ಆದರೆ, ಬಿಜೆಪಿ ತನ್ನ ಷರತ್ತುಗಳಿಗೆ ಇನ್ನೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಸುಳಿವು ನೀಡಿತ್ತು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited