ಆಗ್ರಾ : ಜಮ್ಮು-ಕಾಶ್ಮೀರದಲ್ಲಿ ಪಾಕ್ ಸೇನೆಯ ಗುಂಡಿನ ದಾಳಿ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಸರಬರಾಜು ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಪ್ರತಿ ಭಾರತೀಯ ಯೋಧನ ಸಾವಿಗೆ ಭಾರತ ನಾಲ್ಕು ಪಾಕಿಸ್ತಾನಿಗಳನ್ನು ಕೊಲ್ಲಲಿದೆ ಎಂದು ಹೇಳುವ ಮೂಲಕ ಮತ್ತೆ ವಿವಾದ ಸೃಷ್ಟಿಸಿದ್ದಾರೆ.
ಹೊಸ ವರ್ಷದ ದಿನ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮಥುರಾದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕೇಳಿದ ಒಂದು ಪ್ರಶ್ನೆಗೆ ಉತ್ತರಿಸಿದ ಸಾದ್ವಿ ಈ ಹೇಳಿಕೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸರ್ಕಾರದ ಸಚಿವರಿಗೆ ಪ್ರಚೋದನಕಾರಿ ಭಾಷಣಗಳನ್ನು ಮಾಡದಂತೆ ಸೂಚನೆ ನೀಡಿದ್ದರೂ ಕೂಡ ಅದು ಸಚಿವರಿಗೆ ಪರಿಣಾಮಕಾರಿಯಾಗಿ ಮನವರಿಕೆಯಾದಂತಿಲ್ಲ. ಇದೇ ವೇಳೆ ಭಾರತದಲ್ಲಿ ರಾಜಕೀಯ ಕಸವನ್ನೂ ಗುಡಿಸಿಹಾಕಬೇಕು ಎಂದು ಸಚಿವೆ ಕರೆ ಕೊಟ್ಟಿದ್ದಾರೆ.