ಬೆಂಗಳೂರು : ಪಕ್ಷ ಸಂಘಟನೆಯಲ್ಲಿ ಒಗ್ಗಟ್ಟಿನ ಅವಶ್ಯಕತೆಯಿದೆ. ಸಾಮೂಹಿಕ ನಾಯಕತ್ವದಲ್ಲಿ ಪಕ್ಷವನ್ನು ಸಂಘಟಿಸಿ ಎಂದು ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಬಿಜೆಪಿ ಕಛೇರಿಯಲ್ಲಿ ಆರಂಭವಾಗಿರುವ ಬಿಜೆಪಿ ಕೋರ್ಟ್ ಕಮಿಟಿ ಸಭೆಯಲ್ಲಿ ಮಾತನಾಡಿದ ಶಾ, ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಹೋರಾಟಕ್ಕೆ ಕೇಂದ್ರ ಸರ್ಕಾರದಿಂದ ಸೂಕ್ತ ನೆರವು, ಸಲಹೆ ನೀಡಲು ಸಿದ್ಧ ಎಂದರು.
ಹೋರಾಟಕ್ಕೆ ಮುರಳೀಧರ್ ರಾವ್ ಪೂರ್ಣ ಜವಾಬ್ದಾರಿವಹಿಸಲಿದ್ದಾರೆ. ರಾಜ್ಯ ಸರ್ಕಾರದ ಕಾರ್ಯಕ್ರಮ, ಸಚಿವರ ಕಾರ್ಯವೈಖರಿ ಗಮನಿಸಿ ಹೋರಾಟ ರೂಪಿಸಿ. ಸ್ಥಳೀಯ ನಾಯಕರೇ ಹೋರಾಟ ರೂಪಿಸಲು ಅಮಿತ್ ಶಾ ಸೂಚನೆ ನೀಡಿದ್ದಾರೆ.