ನವದೆಹಲಿ : ಮಾಜಿ ಪ್ರಧಾನಿ ಮತ್ತು ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿದ ಬೆನ್ನಲ್ಲೇ, ಬಿಜೆಪಿ ಹಿರಿಯ ನಾಯಕ ಲಾಲ್ಕೃಷ್ಣ ಅಡ್ವಾಣಿ ಅವರಿಗೆ ಪ್ರತಿಷ್ಠಿತ ಪದ್ಮವಿಭೂಣ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.
ಯೋಗಗುರು ಬಾಬಾ ರಾಮ್ದೇವ್, ಯೋಗ ಪಂಡಿತ ಡೇವಿಡ್ ಫ್ರಾಲೆ ಹಾಗೂ ಆಟಗಾರ್ತಿ ಸೈನಾ ನೆಹ್ವಾಲ್ ಅವರಿಗೆ ಈ ಪ್ರಶಸ್ತಿ ನೀಡಲು ಕೇಂದ್ರ ಮುಂದಾಗಿದೆ ಎಂದು ಮೂಲಗಲು ತಿಳಿಸಿವೆ.
ಎಲ್.ಕೆ.ಅಡ್ವಾಣಿಯವರು ಭಾರತದ ಸಂಸತ್ಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಪ್ರಶಸ್ತಿ ನೀಡಲು ಸಮ್ಮತಿಸಿದೆ ಎಂದು ತಿಳಿದು ಬಂದಿದೆ, ಆದರೆ ಈ ಸಂಬಂಧ ಇನ್ನು ಅಧಿಕೃತ ಆದೇಶ ನೀಡಿಲ್ಲ.