ನವದೆಹಲಿ : ಗುಜರಾತ್ ನ ಕರಾವಳಿ ಪ್ರದೇಶದಲ್ಲಿ ಸ್ಫೋಟಗೊಂಡಿರುವ ಹಡಗಿನ ಬಗ್ಗೆ ತಮ್ಮದೇ ಅನುಮಾನಗಳನ್ನು ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್&id=16807'>ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾಂಗ್ರೆಸ್&id=16807'>ಕಾಂಗ್ರೆಸ್ ಚುನಾವಣೆ ಎದುರಿಸುತ್ತಿರುವುದು ಭಾರತದಲ್ಲೋ ಅಥವಾ ಪಾಕಿಸ್ತಾನದಲ್ಲೋ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಬಳಿಕ ಒಡಿಶಾಗೆ ಪ್ರಥಮ ಬಾರಿಗೆ ಭೇಟಿ ನೀಡಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಎನ್.ಡಿ.ಎ ಸರ್ಕಾರದ ತಪ್ಪುಗಳನ್ನು ಹುಡುಕುವುದಕ್ಕಿಂತಲೂ ರಕ್ಷಣಾ ಇಲಾಖೆಯ ಆತ್ಮವಿಶ್ವಾಸವನ್ನು ಉತ್ತೇಜಿಸುವುದು ಕಾಂಗ್ರೆಸ್&id=16807'>ಕಾಂಗ್ರೆಸ್ ನ ಕೆಲಸ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆದರೆ ಗುಜರಾತ್ ನಲ್ಲಿ ಕಾಣಿಸಿಕೊಂಡಿದ್ದ ಪಾಕಿಸ್ತಾನದ ಹಡಗನ್ನು ಬೆನ್ನಟ್ಟಿ ಸಂಭವಿಸಬಹುದಾದ ಅಪಾಯವನ್ನು ತಡೆಗಟ್ಟಿರುವ ಭಾರತೀಯ ಸೇನೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್&id=16807'>ಕಾಂಗ್ರೆಸ್ಸಿಗರು ಚುನಾವಣೆ ಎದುರಿಸುವುದು ಭಾರತದಲ್ಲೋ ಅಥವಾ ಪಾಕಿಸ್ತಾನದಲ್ಲೋ ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.
ಪಾಕಿಸ್ತಾನ ಹಡಗು ಸ್ಫೋಟಗೊಂಡ ಪ್ರಕರಣದಲ್ಲಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕಾಂಗ್ರೆಸ್&id=16807'>ಕಾಂಗ್ರೆಸ್ ನವರು ಉಗ್ರ ಸಂಘಟನೆಯೆಂದರೆ ಏನು ಎಂದು ವಿವರಿಸಲಿ ಎಂದು ಅಮಿತ್ ಶಾ ಸವಾಲು ಹಾಕಿದ್ದಾರೆ.
ಇದೇ ವೇಳೆ ಪಾಕ್ ಉಗ್ರರಿಂದ ಭಾರತದಲ್ಲಿ ನಡೆಯಬಹುದಾಗಿದ್ದ ದಾಳಿಯನ್ನು ತಡೆದಿದ್ದಕ್ಕಾಗಿ ಕರಾವಳಿ ಕಾವಲು ಪಡೆ ಹಾಗೂ ರಕ್ಷಣಾ ಗುಪ್ತಚರ ವಿಭಾಗಕ್ಕೆ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದಾರೆ.