ನವದೆಹಲಿ : ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪದೇ ಪದೇ ನೀಡುತ್ತಿರುವ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಬಿಜೆಪಿ ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆಗೂಪಕ್ಷಕ್ಕೂ ಸಂಬಂಧವಿಲ್ಲ ಎಂದು ಹೇಳಿದೆ.
ಸಾಕ್ಷಿ ಮಹಾರಾಜ್ ನೀಡುತ್ತಿರುವ ಹೇಳಿಕೆ ಅವರ ವೈಯಕ್ತಿಕವಾದದ್ದೇ ಹೊರತು ಬಿಜೆಪಿಗೂ ಸಂಸದರ ವೈಯಕ್ತಿಕ ಹೇಳಿಕೆಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಮೀರತ್ ನಲ್ಲಿ ನಡೆದ ಎರಡನೇ ಸಂತ ಸಮಾಗಮ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್
ಹಿಂದೂ ಮಹಿಳೆಯರು ಕನಿಷ್ಟ ನಾಲ್ಕು ಮಕ್ಕಳನ್ನಾದರೂ ಹೆರಬೇಕು ಎಂದು ಹೇಳಿದ್ದರು.
ಈ ಹೇಳಿಕೆಗೆ ದೇಶಾದಾದ್ಯಂತ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರು, ಸಾಕ್ಷಿ ಮಹಾರಾಜ್ ಹೇಳಿಕೆ ನೀಡುತ್ತಿರುವುದು ಅವರ ವೈಯಕ್ತಿಕವಾದದ್ದು, ಇದು ಪಕ್ಷದ ಅಥವಾ ಭಾರತ ಸರ್ಕಾರದ ಹೇಳಿಕೆಯಲ್ಲ. ಈ ರೀತಿಯಾಗಿ ಪಕ್ಷ ಎಂದಿಗೂ ಚಿಂತನೆ ನಡೆಸಿಲ್ಲದಿರುವುದರಿಂದ ಪಕ್ಷದ ಸಂಸದರು ನೀಡುವ ವೈಯಕ್ತಿಕ ಹೇಳಿಕೆಗಳಿಗೆ ಪಕ್ಷ ಜವಾಬ್ದಾರಿಯಲ್ಲ ಎಂದು ಹೇಳಿದ್ದಾರೆ.