ತ್ರಿಶೂರ್ : 'ಸುನಂದಾ ಪುಷ್ಕರ್' ನಿಗೂಢ ಸಾವಿನ ಬಗ್ಗೆ ಪೂರ್ವಾಗ್ರಹವಿಲ್ಲದ ತನಿಖೆ ನಡೆಯಬೇಕೆಂದು ಮಾಜಿ ಕೇಂದ್ರ ಸಚಿವ, ಹಾಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ.
ಕೇರಳದ ತ್ರಿಶೂರ್ ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಪತ್ನಿ ಸುನಂದಾ ಪುಷ್ಕರ್ ಅನುಮಾನಾಸ್ಪದ ಸಾವಿನ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ನನ್ನ ಪತ್ನಿಯನ್ನು ಕಳೆದುಕೊಂಡಿರುವ ನೋವಿನಲ್ಲಿದ್ದೇನೆ. ಆದರೂ ಸುಳ್ಳು ಮಾಹಿತಿಗಳನ್ನು ಪ್ರಕಟಿಸುತ್ತಿರುವ ಮಾಧ್ಯಮ ವರದಿಗಳಿಂದ ಮತ್ತಷ್ಟು ನೋವುಂಟಾಗಿದೆ ಎಂದು ಶಶಿ ತರೂರ್ ಹೇಳಿದ್ದಾರೆ.
ಪೊಲೀಸ್ ವಿಚಾರಣೆಯಲ್ಲಿ ನಂಬಿಕೆ ಹೊಂದಿದ್ದು, ಸಾರ್ವಜನಿಕ ಚರ್ಚೆಯಲ್ಲಿ ಪಾಲ್ಗೊಳ್ಳಲು ಇಷ್ಟವಿಲ್ಲ. ಪೊಲೀಸರಿಗೆ ಬೇಕಾದ ಎಲ್ಲ ನೆರವನ್ನೂ ನೀಡುವುದಾಗಿ ಶಶಿ ತರೂರ್ ಹೇಳಿದ್ದಾರೆ. ಅಲ್ಲದೇ ತಮ್ಮ ಸಿಬ್ಬಂದಿಗಳೂ ಸಹ ಪ್ರಕರಣದ ವಿಚಾರಣೆಗೆ ಸಹಕರಿಸಲಿದ್ದಾರೆ ಎಂದು ಶಶಿತರೂರ್ ಹೇಳಿದ್ದಾರೆ.
ನನ್ನ ಪತ್ನಿ ಮರಣ ಹೊಂದಿರುವುದರಿಂದ ನಾನು ಮೌನವಾಗಿದ್ದೇನೆ ಎಂದು ಶಶಿತರೂರ್ ಹೇಳಿದ್ದಾರೆ.