ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ.
ಬೆಂಗಳೂರಿನ ಹೆಚ್ ಎ ಎಲ್ ನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿಗೆ ತೆರಳ ಬೇಕಾಗಿದ್ದ ಹೆಲಿಕ್ಯಾಪ್ಟರ್ ನಲ್ಲಿ ತಾಂತ್ರಿಕ ದೋಷ ಉಂಟಾದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ.
ಸಿಎಂ ಹೆಲಿಕಾಪ್ಟರ್ ನಲ್ಲಿ ಕುಳಿತ ಸಂದರ್ಭದಲ್ಲಿಯೇ ಈ ಅವಗಢ ಸಂಭವಿಸಿದೆ. ಟೇಕ್ ಆಫ್ ಗೆ ಮೊದಲೇ ಹೆಲಿಕಾಪ್ಟರ್ ನ ಸೈಲೆನ್ಸರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಭದ್ರತಾ ಸಿಬ್ಬಂದಿಗಳು ಮುಖ್ಯಮಂತ್ರಿಗಳನ್ನು ಕೆಳಗಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರು ರಸ್ತೆ ಮಾರ್ಗದ ಮೂಲಕವೇ ಮೈಸೂರಿಗೆ ತೆರಳುತ್ತಿದ್ದಾರೆ.
ಅದೃಷ್ಟವಶಾತ್ ಕ್ಷಣದಲ್ಲೇ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಿಎಂ ಜತೆ ಗೃಹ ಸಚಿವ ಕೆ.ಕಜೆ.ಜಾರ್ಜ್, ಹೆಚ್.ಸಿ.ಮಹದೇವಪ್ಪ, ಸಿಎಂ ಜಟಿ ಕಾರ್ಯದರ್ಶಿ ರಾಮಯ್ಯ, ಸಿಎಂ ಮಾಧ್ಯಮ ಸಂಯೋಜಕ ಪ್ರಭಾಕರ್ ಇದ್ದರು.