Untitled Document
Sign Up | Login    
Dynamic website and Portals
  
January 11, 2015

ಬಸ್ ಖರೀದಿ ಅವ್ಯವಹಾರ ತನಿಖೆ : ರಾಮಲಿಂಗಾರೆಡ್ಡಿ

ಬೆಂಗಳೂರು : ಬಸ್ ಖರೀದಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹವಾ ನಿಯಂತ್ರಿತ ಮಾರ್ಕೊಫೋಲೊ ಬಸ್‌ನ ತಾಂತ್ರಿಕ ಕಾರಣಗಳಿಂದ ನಷ್ಟವಾಗುತ್ತಿದೆ. ಈ ಬಸ್‌ಗಳನ್ನು ಸ್ಥಗಿತಗೊಳಿಸುವ ಸಂಬಂಧ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ ಎಂದರು.

ಬಸ್ ಖರೀದಿ ತನಿಖೆಗೆ ಕಾಲಮಿತಿ ವಿಧಿಸಿಲ್ಲ. ಯಾರಿಂದ ತನಿಖೆ ಮಾಡಿಸಬೇಕೆಂದು ಇನ್ನೂ ನಿರ್ಧಾರವಾಗಿಲ್ಲ. ಆದರೂ ಈ ಆರೋಪದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯನವರ ಬದಲಾವಣೆ ಇಲ್ಲ. ಪೂರ್ಣಾವಧಿಯವರೆಗೂ ಅವರೇ ಮುಂದುವರೆಯುತ್ತಾರೆ. ಮುಂದಿನ ಚುನಾವಣೆಯಲ್ಲಿ ದಲಿತರೊಬ್ಬರು ರಾಜ್ಯದ ಮುಖ್ಯಮಂತ್ರಿಯಾಗಬಹುದು ಎಂಬ ಚರ್ಚೆ ನಡೆಸಲಾಗುತ್ತಿದೆ ಎಂದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited