ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯಾಣಿಸಬೇಕಿದ್ದ ಹೆಲಿಕಾಫ್ಟರ್ ನಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ಗೃಹ ಸಚಿವ ಕೆ.ಜೆ ಜಾರ್ಜ್ಜಾ, ಉನ್ನತ ತನಿಖೆಗೆ ಆದೇಶಿಸಿದ್ದಾರೆ.
ಜ.10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂಡ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಿತ್ತು. ಆದರೆ ಸಿ.ಎಂ ತೆರಳಬೇಕಿದ್ದ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಭದ್ರತಾ ಲೋಪವೇ ಇದಕ್ಕೆ ಕಾರಣ ಎಂದು ಹೇಳಲಾಗಿದ್ದು ಈ ಪ್ರಕರಣದ ಸಂಬಂಧ ತನಿಖೆಗೆ ಗೃಹ ಸಚಿವರು ಆದೇಶಿಸಿದ್ದಾರೆ.
ಸಿ.ಎಂ ಹೆಲಿಕಾಫ್ಟರ್ ನಲ್ಲಿ ಪ್ರಯಾಣಿಸಬೇಕಾದರೆ ಹೆಲಿಪ್ಯಾಡ್ ನಲ್ಲಿ ಆಂಬುಲೆನ್ಸ್, ಫೈರ್ ಇಂಜಿನ್ ಇರಬೇಕಾಗುತ್ತದೆ. ಆದರೆ ಜ.10ರಂದು ಈ ಯಾವುದೇ ಭದ್ರತಾ ಕ್ರಮಗಳನ್ನು ಕೈಗೊಂಡಿಲ್ಲದೇ ಇರುವುದು ಅಚ್ಚರಿ ಮೂಡಿಸಿದೆ. ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಸ್ಥಳದಲ್ಲಿ ಭದ್ರತಾ ಸಿಬ್ಬಂದಿ ಇಲ್ಲದಿದ್ದದ್ದೂ ಸಹ ಅನುಮಾಕ್ಕೆ ಕಾರಣವಾಗಿದೆ. ಅಲ್ಲದೇ ಮುಖ್ಯಮಂತ್ರಿ, ರಾಜ್ಯಪಾಲರು ಸೇರಿದಂತೆ ಗಣ್ಯರು ಪ್ರಯಾಣೀಸುವ ಹೆಲಿಕಾಫ್ಟರ್ ನ್ನು ಪರೀಕ್ಷಾರ್ಥ ಹಾರಾಟ ನಡೆಸಲಾಗುತ್ತದೆ. ಆದರೆ ಸಿ.ಎಂ ಪ್ರಯಾಣದ ವೇಳೆ ಪರೀಕ್ಷಾರ್ಥ ಹಾರಾಟ ನಡೆಸಿಲ್ಲದೇ ಇರುವುದು ಬೆಳಕಿಗೆ ಬಂದಿದೆ.
ಮೇಲ್ನೋಟಕ್ಕೆ ಈ ಎಲ್ಲಾ ವೈಫಲ್ಯಗಳೂ ನಡೆದಿರುವುದರಿಂದ, ಗೃಹ ಸಚಿವರು ತನಿಖೆಗೆ ಆದೇಶಿದ್ದಾರೆ.