ಕೊಪ್ಪಳ : ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಉಗ್ರರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಬಂಧಿತ ಉಗ್ರರ ತೀವ್ರ ವಿಚಾರಣೆ ನಡೆಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದರು.
ಉಗ್ರರ ಬಗ್ಗೆ ಮೃದುಧೋರಣೆ ತಲೆಯುವ ಪ್ರಶ್ನೆಯೇ ಇಲ್ಲ ಎಂದ ಸಿದ್ದರಾಮಯ್ಯ, ಹಾಗೆಂದು ಅಮಾಯಕರನ್ನು ಬಂಧಿಸುವ ಉದ್ದೇಶವೂ ಸರ್ಕಾರಕ್ಕಿಲ್ಲ ಎಂದು ತಿಳಿಸಿದರು.
ಇದೇ ವೇಳೆ ದಲಿತರು ಸಿಎಂ ಆಗುತ್ತಾರೆ ಎಂಬ ಸಚಿವರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ದಲಿತರು ಸಿಎಂ ಆಗಬೇಕು. ಇದರಲ್ಲಿ ಎರಡು ಮಾತಿಲ್ಲ. ಮುಂದೊಂದು ದಿನ ರಾಜ್ಯದಲ್ಲಿ ದಲಿತರು ಅಧಿಕಾರಕ್ಕೆ ಬರುತ್ತಾರೆ. ಆದರೆ ಸಧ್ಯಕ್ಕೆ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.