ನವದೆಹಲಿ : ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ರನ್ನು ಕೇಂದ್ರ ಸರ್ಕಾರ ವಜಾ ಮಾಡಿದೆ.
ಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ಅವಧಿಗೆ ಪದಚ್ಯುತ ಮುಖ್ಯಸ್ಥ ಅವಿನಾಶ್ ಚಂದರ್ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾವಧಿ ಮುಗಿಯಲು ಇನ್ನೂ 15 ತಿಂಗಳಿತ್ತು.
ಚಂದರ್ ಅವರ ಪದಚ್ಯುತಿಗೆ ಪ್ರಧಾನಿ ನರೇಂದ್ರ ಮೋದಿ ಅವರಿದ್ದ ನೇಮಕಾತಿ ಕುರಿತ ಸಂಪುಟ ಸಮಿತಿ ತೀರ್ಮಾನಿಸಿದೆ. ಅದರಂತೆ ಜ.31ರಂದು ಅವರು ಹುದ್ದೆಯಿಂದ ಬಿಡುಗಡೆಯಾಗಲಿದ್ದಾರೆ .
ಡಿಆರ್ಡಿಒ ಮುಖ್ಯಸ್ಥರಾಗಿ ಅವರು ಸಂಶೋಧನಾ ಕ್ಷೇತ್ರಕ್ಕೆ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. ಚಂದರ್ ಅವರು ರಕ್ಷಣಾ ಸಚಿವರ ವೈಜ್ಞಾನಿಕ ಸಲಹೆಗಾರರಾಗಿ ಕಳೆದ ನ.30ರಂದು ನಿವೃತ್ತರಾಗಿದ್ದರು.