ಮೈಸೂರು : ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣ ರಬ್ಬಿಶ್. ನಮ್ಮ ಅವಧಿಯಲ್ಲಿ ಯಾವುದೇ ಡಿನೋಟಿಫಿಕೇಷನ್ ನಡೆದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಸಂವಿಧಾನದ ಪ್ರಕಾರ ಕೆಲಸ ಮಾಡುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ ಎಂದರು.
ನಮ್ಮ ಅವಧಿಯಲ್ಲಿ 1ಗುಂಟೆ ಜಾಗ ಕೂಡ ಡಿನೋಟಿಫಿಕೇಷನ್ ಮಾಡಿಲ್ಲ. ಡಿನೋಟಿಫಿಕೇಷನ್ ಆಗಿದ್ದು ಬಿ.ಎಸ್.ಯಡಿಯೂರಪ್ಪನವರ ಅವದಿಯಲ್ಲಿ. ತನಿಖೆ ನಡೆದ್ರೆ ಬಿ ಎಸ್ ವೈ ಸಿಕ್ಕಿಹಾಕಿಕೊಳ್ಳುತ್ತಾರೆ ಎಂದು ಹೇಳಿದರು.
ಅರ್ಕಾವತಿ ಬಡಾವಣೆ ಕೆಲಸ ನಡೆದದ್ದು ಬಿಎಸ್ ವೈ ಕಾಲದಲ್ಲಿ. ಅವರ ಕಾಲದಲ್ಲಿ 610 ಎಕರೆ ಅವ್ಯವಹಾರ ನಡೆದಿದೆ. ಈ ಕುರಿತು ವರದಿಯಲ್ಲಿ ಸ್ಪಷ್ಟವಾಗಿ ನಮೂದಿಸಲಾಗಿದೆ. ಇದರ ಫಲಾನುಭವಿಗಳು ಜಗದೀಶ್ ಶೆಟ್ಟರ್ ಹಾಗೂ ಡಿವಿಎಸ್ ಎಂದು ತಿಳಿಸಿದರು.
ಈಗ ನಮ್ಮ ಮೇಲೆ ಆರೋಪ ಮಾಡುವ ಮೂಲಕ ಬಿಜೆಪಿ ಮುಖಂಡರು ರಾಜಕೀಯ ಮಾಡುತ್ತಿದ್ದಾರೆ. ರಾಜ್ಯಪಾಲರನ್ನು ದುರುಪಯೋಗ ಪಡಿಸಿಕೊಳ್ಳಲು ಯತ್ನ ನಡೆಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ ಅವರು, ನನ್ನ ಪ್ರಾಮಾಣಿಕತೆ ಬಗ್ಗೆ ಮಾತನಾಡೋ ನೈತಿಕತೆ ಬಿಜೆಪಿಗಿಲ್ಲ ಎಂದರು.