ನವದೆಹಲಿ : ಎರಡು ದಿನಗಳ ಹಿಂದಷ್ಟೆ ಬಿಜೆಪಿ ಸೇರಿದ್ದ ಕಿರಣ್ ಬೇಡಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಶತಾಯಗತಾಯ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸಿದ್ದು, ಪ್ರಮುಖವಾಗಿ ಐದು ಕಡೆಗಳಲ್ಲಿ ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯವರ ರಾಲಿ ಆಯೋಜಿಸಿದೆ. ಅಲ್ಲದೇ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲೂ ವ್ಯಾಪಕ ಪ್ರಚಾರ ಸಭೆಗಳನ್ನು ಆಯೋಜಿಸಿದೆ. ಈ ಎಲ್ಲಾ ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಕಿರಣ್ ಬೇಡಿ ನಿರ್ಧರಿಸಿದ್ದಾರೆ.
ಇನ್ನು ಆಮ್ ಆದ್ಮಿ ಪಕ್ಷದ ಪ್ರಾಬಲ್ಯವಿರುವ ಕ್ಷೇತ್ರಳಲ್ಲಿ ಶಾಜಿಯಾ ಇಲ್ಮಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ರ್ಯಾಲಿ ವೇಳೆ ಕಿರಣ್ ಬೇಡಿ ಅವರನ್ನು ದೆಹಲಿ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ದೆಹಲಿ ವಿಧಾನಸಭಾ ಚುನಾವಣೆ ಎಂದರೆ ಅರವಿಂದ್ ಕೇಜ್ರಿವಾಲ್ ವರ್ಸಸ್ ಕಿರಣ್ ಬೇಡಿ ಎಂಬ ರೀತಿಯಲ್ಲಿ ಬಿಂಬಿತವಾಗುತ್ತಿದೆ.