Untitled Document
Sign Up | Login    
Dynamic website and Portals
  
January 19, 2015

ಬಿಹಾರದಲ್ಲಿ ಭುಗಿಲೆದ್ದ ಕೋಮುಗಲಭೆಗೆ 3 ಬಲಿ

ಪಾಟ್ನಾ : 'ಬಿಹಾರ'ದಲ್ಲಿ ಕೋಮುಗಲಭೆ ಭುಗಿಲೆದ್ದಿದ್ದು ಮೂವರ ಸಾವಿಗೆ ಕಾರಣವಾಗಿದೆ. ಅನ್ಯಕೋಮಿನ ಯುವಕನನ್ನು ಯುವತಿಯೋರ್ವಳು ಪ್ರೀತಿಸಿದ್ದೇ ಕೋಮುಗಲಭೆಗೆ ಕಾರಣವಾಗಿದೆ.

ಬಿಹಾರದ ಮುಜಫರ್ ಪುರ ಜಿಲ್ಲೆಯ ಸರಯ್ಯಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ. ಈ ಸಂಬಂಧ ಹತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಯುವಕನ ಅಪಹರಣವಾಗಿತ್ತು. ಆ ಯುವಕನ ಶವ ನಿನ್ನೆ ಯುವತಿಯ ತಂದೆಯ ಜಮೀನಿನಲ್ಲಿ ಪತ್ತೆಯಾಗಿದ್ದರಿಂದ ಹುಡುಗಿಯ ಕಡೆಯವರೆ ಯುವಕನನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಬಹುಸಂಖ್ಯಾತ ಕೋಮಿನ ಗುಂಪು, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಗ್ರಾಮಕ್ಕೆ ನುಗ್ಗಿ 40ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಮೂವರ ಸಜೀವ ದಹನವಾಗಿತ್ತು. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅನ್ಯ ಕೋಮಿನ ಯುವಕನನ್ನು ತಮ್ಮ ಮಗಳು ಪ್ರೀತಿಸುತ್ತಿರುವುದಕ್ಕೆ ಹುಡುಗಿಯ ತಂದೆ ವಿರೋಧ ವ್ಯಕ್ತಪಡಿಸಿದ್ದರು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ತಂದೆಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಕಿಗೆ ಬಲಿಯಾದವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರವನ್ನು ಬಿಹಾರ ಸರ್ಕಾರ ಘೋಷಿಸಿದೆ. ಸದ್ಯ ಸರಯ್ಯಾ ಗ್ರಾಮದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : Crime

ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತ: ಸಾವಿನ ಸಂಖ್ಯೆ ಐದಕ್ಕೆ ಏರಿಕೆ
  • ಬೆಂಗಳೂರಿನ ಮೂರು ಅಂತಸ್ತಿನ ಕಟ್ಟಡವೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಕಟ್ಟಡ ಕುಸಿತಗೊಂಡ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
  • ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿದ ಎಸ್ ಐ ಟಿ
  • ಸೈನೈಡ್ ಮೋಹನ್ ಗೆ ಜೀವಾವಧಿ ಜೈಲು ಶಿಕ್ಷೆ: ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited