ನವದೆಹಲಿ : ಜ.21ರಿಂದ 24ರವರೆಗೆ ನಡೆಯ ಬೇಕಿದ್ದ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ಗಳ ಮುಷ್ಕರ ಮುಂದೂಡಲಾಗಿದೆ.
ನೌಕರರ ಬೇಡಿಕೆಯ ಕುರಿತು ಫೆಬ್ರುವರಿ ಮೊದಲ ವಾರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭಾರತೀಯ ಬ್ಯಾಂಕ್ಗಳ ಒಕ್ಕೂಟ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರವನ್ನು ತಡೆ ಹಿಡಿಯಲಾಗಿದೆ ಎಂದು ಅಖೀಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ ಪ್ರಕಟಿಸಿದೆ.
ಒಂದು ವೇಳೆ ನಮ್ಮ ಬೇಡಿಕೆ ಈಡೇರದೇ ಹೋದಲ್ಲಿ ಮತ್ತೆ ಮುಷ್ಕರದ ಹೊಸ ದಿನಾಂಕ ಪ್ರಕಟಿಸಲಾಗುವುದು ಎಂದು ಒಕ್ಕೂಟ ತಿಳಿಸಿದೆ.
ಬಹುದಿನದ ಬೇಡಿಕೆಯಾದ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ಮತ್ತು ಕೇಂದ್ರ ಸರ್ಕಾರದ ಹಟಮಾರಿ ಧೋರಣೆಯ ವಿರುದ್ಧ ಸಾರ್ವಜನಿಕ ವಲಯದ ಬ್ಯಾಂಕ್ ನೌಕರರು ಜ.21ರಿಂದ 4 ದಿನಗಳ ಕಾಲ ಮುಷ್ಕರ ನಡೆಸಲು ನಿರ್ಧರಿಸಿದ್ದರು.