ನವದೆಹಲಿ : ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೀಡಿದ್ದ ಸವಾಲು ಸ್ವೀಕರಿಸಿರುವ ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು ತಿಳಿಸಿದ್ದಾರೆ.
ಕೇಜ್ರಿವಾಲ್ ಚರ್ಚೆಯಲ್ಲಿ ನಂಬಿಕೆಯಿಟ್ಟಿದ್ದಾರೆ. ನಾನು ಸೇವೆಯಲ್ಲಿ ನಂಬಿಕೆಯಿಟ್ಟಿದ್ದೇನೆ. ಕೇಜ್ರಿವಾಲ್ ಜೊತೆ ಯಾವುದೆ ವಿಷಯದ ಬಗ್ಗೆ ಸದನದಲ್ಲಿ ಚರ್ಚಿಸಲು ಸಿದ್ಧಳಾಗಿದ್ದೇನೆ. ವಿಧಾನಸಭೆಯಲ್ಲಿ ನಾವು ವಿಸ್ತೃತ ಚರ್ಚೆ ನಡೆಸೋಣ ಎಂದು ಹೇಳಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕ್ರೇಜಿವಾಲ್ ರವರು ಸಾರ್ವಜನಿಕವಾಗಿ ಚರ್ಚೆಗೆ ಬರಲು ಬಿಜೆಪಿ ನಾಯಕಿ ಕಿರಣ್ ಬೇಡಿಯವರಿಗೆ ಈ ಹಿಂದೆ ಸವಾಲೆಸೆದಿದ್ದರು.
ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಾಮನಿರ್ದೇಶನಗೊಂಡಿರುದಕ್ಕೆ ಸಾಮಾಜಿಕ ತಾಣ ಟ್ವಿಟರ್ ನಲ್ಲಿ ಬೇಡಿ ಯವರಿಗೆ ಅಭಿನಂದನೆ ಸಲ್ಲಿಸಿದ್ದ ಆಪ್ ಪಕ್ಷದ ನಾಯಕ ನಾನು ನಿಮ್ಮನ್ನು ಟ್ವಿಟರ್ ನಲ್ಲಿ ಫಾಲೋ ಮಾಡಲು ಬಯಸುತ್ತೀನಿ ನೀವು ನನ್ನನ್ನು ಬ್ಲಾಕ್ ಮಾಡಿದ್ದೀರಿ, ದಯವಿಟ್ಟು ಬ್ಲಾಕ್ ತೆಗೆಯಿರಿ ಎಂದು ಮರು ಟ್ವಿಟ್ ಮಾಡಿದ್ದರು.