ನವದೆಹಲಿ : 'ಭಾರತ'ಕ್ಕೆ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಉಗ್ರರನ್ನು ಕಂಡಲ್ಲಿ ಗುಂಡಿಕ್ಕಲು ಬಿ.ಎಸ್.ಎಫ್ ಯೋಧರಿಗೆ ಭಾರತ ಸರ್ಕಾರ ಸೂಚನೆ ನೀಡಿದೆ.
ಜ.26ರಂದು ಭಾರತಕ್ಕೆ ಬರಾಕ್ ಒಬಾಮ ಆಗಮಿಸುತ್ತಿದ್ದು ಉಗ್ರರು ಗಡಿ ಭಾಗದಲ್ಲಿ ವಿಧ್ವಂಸಕ ಕೃತ್ಯ ನಡೆಸುವುದನ್ನು ತಡೆಗಟ್ಟಲು ಕಂಡಲ್ಲಿ ಗುಂಡಿಕ್ಕುವಂತೆ ಗಡಿ ಭದ್ರತಾ ಪಡೆಗೆ ಕೇಂದ್ರ ಸರ್ಕಾರ ಆದೇಶ ನೀಡಿದೆ.
ಗಡಿ ಭಾಗದಲ್ಲಿ ಯಾವುದೇ ವ್ಯಕ್ತಿ ಅನುಮಾನಾಸ್ಪದವಾಗಿ ಕಂಡುಬಂದರೆ ತಕ್ಷಣವೇ ಗುಂಡು ಹಾರಿಸಿ ಹತ್ಯೆ ಮಾಡಲು ಕೇಂದ್ರ ಸರ್ಕಾರ ಸೂಚನೆ ನೀಡಿದೆ ಎಂದು ಬಿ.ಎಸ್.ಎಫ್ ನ ಐಜಿ ರಾಕೇಶ್ ಶರ್ಮಾ ಹೇಳಿದ್ದಾರೆ.
ಭಾರತದ ಗಡಿಯೊಳಗೆ ಉಗ್ರರು ಪ್ರವೇಶಿಸುವುದಕ್ಕೆ ಪಾಕಿಸ್ತಾನ ಸಹಾಯ ಮಾಡುತ್ತಿದೆ ಎಂದು ಈ ಹಿಂದೆ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದರು. ಕಾಶ್ಮೀರ ವಿವಾದವನ್ನು ಜೀವಂತವಾಗಿಡಲು ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು ಭಾರತದ ಗಡಿಯೊಳಗೆ ಪ್ರವೇಶಿಸಲು ಉಗ್ರರಿಗೆ ಸಹಾಯ ಮಾಡುತ್ತಿದೆ ಎಂಬ ಅಂಶ ಸ್ಪಷ್ಟವಾಗಿದ್ದು, ಕಂಡಲ್ಲಿ ಗುಂಡಿಕ್ಕಲು ಆದೇಶ ನೀಡಲಾಗಿದೆ.