ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹಣ ಮಾತ್ರ ಕಾಂಗ್ರೆಸ್&id=16976'>ಕಾಂಗ್ರೆಸ್ ಮತ್ತು ಬಿಜೆಪಿಯಿಂದ ಪಡೆದು, ಮತ ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ನೀಡಬೇಕೆಂದು ಕರೆ ನೀಡಿದ್ದ ಆಮ್ ಅದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದೆ.
ದೆಹಲಿಯ ಉತ್ತಮ್ ನಗರ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಕೇಜ್ರಿವಾಲ್, 'ನೀವು ಕಾಂಗ್ರೆಸ್&id=16976'>ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಹಣವನ್ನು ಪಡೆಯಿರಿ, ಆದರೆ ಮತವನ್ನು ಮಾತ್ರ ಆಮ್ ಆದ್ಮಿ ಪಕ್ಷಕ್ಕೆ ಹಾಕಿ' ಎಂದು ವಿವಾದಾತ್ಮಕ ಕರೆ ನೀಡಿದ್ದರು. ಈ ಸಂಬಂಧ ಕಾಂಗ್ರೆಸ್&id=16976'>ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.
ಕಾಂಗ್ರೆಸ್&id=16976'>ಕಾಂಗ್ರೆಸ್ ದೂರು ಸ್ವೀಕರಿಸಿದ್ದ ಚುನಾವಣಾ ಆಯೋಗ ಇಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿವರಣೆ ಕೇಳಿ ನೋಟಿಸ್ ನೀಡಿದ್ದು, ಗುರುವಾರದೊಳಗೆ ನೋಟಿಸ್ಗೆ ಉತ್ತರಿಸುವಂತೆ ಸೂಚಿಸಿದೆ. ಚುನಾವಣೆ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ನೀಡಿರುವ ಹೇಳಿಕೆ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಮುಜುಗರ ಉಂಟಾಗಿದೆ.