ನವದೆಹಲಿ : 'ಕಲ್ಲಿದ್ದಲು ಹಂಚಿಕೆ' ಹಗರಣದ ಸಂಬಂಧ ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ.
ಹಿಂಡಾಲ್ಕೋ ಕಂಪನಿಗೆ ಅಕ್ರಮವಾಗಿ ಕಲ್ಲಿದ್ದಲು ಹಂಚಿಕೆ ಮಾಡಿದ ಪ್ರಕರಣದಲ್ಲಿ ಸಿಂಗ್ ಅವರನ್ನು ಎರಡು ದಿನಗಳ ಹಿಂದೆಯೇ ವಿಚಾರಣೆಗೊಳಪಡಿಸಲಾಗಿದೆ. ಆದರೆ ಈ ಬಗ್ಗೆ ಮನಮೋಹನ್ ಸಿಂಗ್ ಆಗಲೀ ಅಥವಾ ಸಿಬಿಐ ಅಧಿಕಾರಿಗಳಾಗಲಿ ಸ್ಪಷ್ಟನೆ ನೀಡಿಲ್ಲ.
ಪ್ರಧಾನಿ ಮನಮೋಹನ್ ಸಿಂಗ್ ಅವರು ಕಲ್ಲಿದ್ದಲು ಖಾತೆಯನ್ನೂ ನಿರ್ವಹಿಸುತ್ತಿದ್ದ ವೇಳೆ ಹಿಂಡಾಲ್ಕೋಗೆ ತಲಾಬ್ರಿಯಾ 2 ಮತ್ತು 3 ಕಲ್ಲಿದ್ದಲು ಬ್ಲಾಕ್ ಹಂಚಿಕೆ ಮಾಡಿರುವ ಸಂಬಂಧ ಸಿಬಿಐ ವಿಚಾರಣೆ ನಡೆಸಿದೆ ಎಂದು ತಿಳಿದುಬಂದಿದೆ.
ಕಲ್ಲಿದ್ದಲು ಖಾತೆ ಪ್ರಧಾನಿ ಬಳಿಯೇ ಇದ್ದ ಕಾರಣ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿದ್ದಾರೆ.
ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ ಸಂಸ್ಥೆ ಜ.27 ತನಿಖಾ ಪ್ರಗತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿಯಾಗಿರುವ ಮಾಜಿ ಪ್ರಧಾನಿಯನ್ನು ವಿಚಾರಣೆಗೊಳಪಡಿಸಿರುವ ಸಾಧ್ಯತೆ ಇದೆ.