Untitled Document
Sign Up | Login    
Dynamic website and Portals
  
January 22, 2015

ವಿಮಾನ ಹಾರಾಟ ನಿಷೇಧ: ಅಮೆರಿಕ ಬೇಡಿಕೆಗೆ ಭಾರತ ಒಪ್ಪಿಗೆ

ನವದೆಹಲಿ : ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ.

ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು ಒತ್ತಾಯಿಸಿದ್ದವು. ಆದರೆ, ಭಾರತ ಈ ಒತ್ತಾಯವನ್ನು ನಯವಾಗಿ ತಿರಸ್ಕರಿಸಿತ್ತು. ಆದರೆ, ಈಗ ಅಮೆರಿಕದ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದೆ. ಆದರೆ, ಅಂದು ವೈಮಾನಿಕ ಪ್ರದರ್ಶನ ನೀಡಲಿರುವ ವಾಯುಸೇನೆಯ ವಿಮಾನಗಳ ಹಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಅಮೆರಿಕ ಅಧ್ಯಕ್ಷರ ಮೇಲೆ ಆಗಸದಲ್ಲೂ ದಾಳಿ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಜಪಥದ ಸುತ್ತ ವೈಮಾನಿಕ ಎಚ್ಚರಿಕೆ ಹಾಗೂ ನಿಯಂತ್ರಣ ವ್ಯವಸ್ಥೆ ಅಳವಡಿಸಲಾಗಿದೆ. ಅಮೆರಿಕದ ಬೇಡಿಕೆಯಂತೆ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಅದು 400 ಕಿ.ಮೀ. ದೂರದಿಂದಲೂ ಹಾರಿ ಬರುವ ಕ್ಷಿಪಣಿಗಳು ಹಾಗೂ ವಿಮಾನಗಳನ್ನು ಪತ್ತೆಹಚ್ಚುವ ಸಾಮರ್ಥ್ಯವನ್ನು ಹೊಂದಿವೆ. ಇದೇ ವೇಳೆ, ದೆಹಲಿಯಲ್ಲಿ ಪ್ರಯಾಣಿಕರ ವಿಮಾನಗಳ ಹಾರಾಟದ ಕನಿಷ್ಠ ಎತ್ತರವನ್ನು 32 ಸಾವಿರ ಅಡಿಯಿಂದ 35 ಸಾವಿರ ಅಡಿಗೆ ಏರಿಸಲಾಗಿದೆ.

ರಾಜಪಥದ ಮೇಲೆ ವಿಮಾನ ಹಾರಾಟದ ಮೇಲಿನಿ ನಿಷೇಧದ ಪರಿಣಾಮ ದೆಹಲಿ ಸೇರಿದಂತೆ ಅಕ್ಕಪಕ್ಕದ ಎಲ್ಲ ವಿಮಾನ ನಿಲ್ದಾಣಗಳ ಮೇಲೂ ಬೀಳಲಿದೆ. ರಾಜಪಥದಲ್ಲಿ ಕಾರ್ಯಕ್ರಮ ನಡೆಯುವವರೆಗೆ ದೆಹಲಿ, ಜೈಪುರ, ಅಮೃತಸರ, ಲಖನೌ, ಆಗ್ರಾ ವಿಮಾನ ನಿಲ್ದಾಣಗಳಲ್ಲಿ ವಿಮಾನ ಹಾರಾಟ ಸ್ಥಗಿತಗೊಳ್ಳಲಿದೆ.

ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ವರೆಗೆ ರಾಜಪಥದ ಅಕ್ಕಪಕ್ಕ ಇರುವ ಬಹುಮಹಡಿ ಕಟ್ಟಡಗಳಿಗೂ ಬೀಗ ಬೀಳಲಿದೆ. ಒಬಾಮ ಭದ್ರತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಕಣ್ಗಾವಲು ಕಾರ್ಯಾಚರಣೆ ಪರಿಶೀಲನೆಗಾಗಿಯೇ ಬಹುಸಂಸ್ಥೆಯ ಪರಿಶೀಲನಾ ಕೊಠಡಿ ಸ್ಥಾಪಿಸಲೂ ನಿರ್ಧರಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ರಾಜಪಥವನ್ನು ಬುಧವಾರದಿಂದಲೇ ಬಂದ್ ಮಾಡಲಾಗಿದೆ.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ವಾಯುಸೇನೆಯ 60ಕ್ಕೂ ಹೆಚ್ಚು ಕಾಪ್ಟರ್, ವಿಮಾನಗಳು ಸಾಹಸ ಪ್ರದರ್ಶಿಸಲಿರುವುದು ಈ ಬಾರಿಯ ವಿಶೇಷ. ಈ ಮೂಲಕ ಅಮೆರಿಕ ಅಧ್ಯಕ್ಷರ ಮುಂದೆ ಭಾರತವು ತನ್ನ ವೈಮಾನಿಕ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ.

ಒಬಾಮ ಭೇಟಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜಧಾನಿಯಲ್ಲಿ ಡ್ರೋಣ್‍ಗಳ ಹಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಎಲ್ಲ ಠಾಣೆಗಳಿಗೂ ಸೂಚನೆ ರವಾನಿಸಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited