ಬೆಂಗಳೂರು : ರಾಜ್ಯಪಾಲ ವಾಜುಭಾಯಿ ವಾಲ ಅವರ ಹುಟ್ಟುಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ಹುಟ್ಟು ಹಬ್ಬ ಶುಭಾಷಯ ಕೋರಿದರು.
ರಾಜ್ಯಪಾಲರ 76ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಕೋರಿದ್ದಾರೆ. ಈ ವೇಳೆ ಸಚಿವ ರೋಷನ್ ಬೇಗ್ ಸಾಥ್ ನೀಡಿದರು.
ಸಿಎಂ ಅರ್ಧ ಗಂಟೆ ವೇಳೆ ಚರ್ಚೆ ಮಾತನಾಡಿದ್ದಾರೆ. ಆದರೆ ಯಾವುದೇ ರಾಜಕೀಯ ಬೆಳವಣಿಗೆಯಾಗಲೀ ಅಥವಾ, ಡಿ ನೋಟಿಫೇಕಷನ್ ಪ್ರಕರಣವನ್ನು ಚರ್ಚೆ ಮಾಡಿಲ್ಲ ಎಂದು ತಿಳಿದುಬಂದಿದೆ.
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿ ನಾಯಕರು ರಾಜ್ಯಪಾಲರ ಭೇಟಿ ಹಿನ್ನಲೆಯಲ್ಲಿ ಸಿಎಂ ರಾಜ್ಯಪಾಲರನ್ನು ಭೇಟಿಯಾಗಿರುವುದು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ ಸಿಎಂ, ಯಾವುದೇ ರಾಜಕೀಯ ವಿಷಯ ಪ್ರಸ್ತಾಪಿಸದೇ ಶುಭಾಷಯಗಳನ್ನಷ್ಟೇ ಕೋರಿ ವಾಪಸ್ಸಾಗಿದ್ದಾರೆ.
ಈ ನಡುವೆ ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೊಕದ್ದಮೆ ಹೂಡಲು ಬಿಜೆಪಿ ನಾಯಕರು ವೇದಿಕೆ ಸಿದ್ಧ ಪಡಿಸಿದ್ದು, ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಲು ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 19ರಡಿ ಸಾಮಾಜಿಕ ಕಾರ್ಯಕರ್ತರೊಬ್ಬರ ನೇತೃತ್ವದಲ್ಲಿ ದೂರು ಸಲ್ಲಿಸಲಿದ್ದಾರೆ.
ರಾಜ್ಯಪಾಲರು ಬಿಜೆಪಿ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಸಾಧ್ಯತೆಯೂ ಇದೆ. ಇನ್ನು ಅಧಿಕಾರಿಗಳನ್ನು ಕರೆಸಿ ಪ್ರಕರಣ ಸಂಬಂಧ ವಿವರಣೆ ಕೇಳುವ ಅಧಿಕಾರವೂ ರಾಜ್ಯಪಾಲಗಿರುವುದರಿಂದ ಅರ್ಕಾವತಿ ಡಿ ನೋಟಿಫಿಕೇಷನ್ ಪ್ರಕರಣದ ಚೆಂಡು ಈಗ ರಾಜಭವನದ ಅಂಗಳದಲ್ಲಿದೆ.