ನವದೆಹಲಿ : ನವದೆಹಲಿಯಲ್ಲಿ ಐತಿಹಾಸಿಕ ಗಣಾರಾಜ್ಯೋತ್ಸವ ದಿನಾಚರಣೆಗೆ ಚಾಲನೆ ದೊರೆತಿದ್ದು, ರಾಜ್ ಪಥ್ ನಿಂದ ಪಥ ಸಂಚಲನ ಕಾರ್ಯಕ್ರಮ ಪ್ರಾರಂಭವಾಗಿದೆ.
ಇದಕ್ಕೂ ಮುನ್ನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಬ್ಬರು ಹುತಾತ್ಮ ಯೋಧರಾದ ಮುಕುಂದ್ ವರದರಾಜನ್ ಹಾಗೂ ನೀರಜ್ ಕುಮಾರ್ ಸಿಂಗ್ ಅವರಿಗೆ ಅಶೋಕ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಹುತಾತ್ಮ ಯೋಧರ ಸಂಬಂಧಿಗಳು ಅಶೋಕ ಚಕ್ರ ಪ್ರಶಸ್ತಿ ಸ್ವೀಕರಿಸಿದರು.
66ನೇ ಗಣರಾಜ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ದೆಹಲಿಯಲ್ಲಿ ತುಂತುರು ಮಳೆ ಪ್ರಾರಂಭವಾಗಿದ್ದು, ಮಳೆ ನಡುವೆಯೇ ಪಥ ಸಂಚಲನ ಕಾರ್ಯಕ್ರಮ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ, ಅವರ ಪತ್ನಿ ಮಿಶೆಲ್ ಒಬಾಮ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಥಸಂಚಲನವನ್ನು ವೀಕ್ಷಿಸುತ್ತಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದಾರೆ.
*ರಾಷ್ಟ್ರಪತಿಗಳಿಂದ ತ್ರಿವರ್ಣ ಧ್ವಜಾರೋಹಣ, ಪ್ರಧಾನಿ ಮೋದಿ ಹಾಗೂ ಅವರ ಸಚಿವ ಸಂಪುಟ ಸದಸ್ಯರಿಂದ ಧ್ವಜ ವಂದನೆ ಗೌರವ.
*3 ಸೇನೆಗಳ ಶಸ್ತ್ರಾಸ್ತ್ರಗಳ ಪ್ರದರ್ಶನ.
*ವಾಯು ಸೇನೆಯ ಮಹಿಳಾ ಅಧಿಕಾರಿಗಳಿಂದ ಪಥಸಂಚಲನ.
*ಚನ್ನಪಟ್ಟಣ ಗೊಂಬೆಗಳ ಸ್ತಬ್ದಚಿತ್ರ ಪ್ರಥಮ ಸ್ತಬ್ದ ಚಿತ್ರವಾಗಿ ಮೆರವಣಿಗೆಯಲ್ಲಿ ಸಾಗಿತು. ನಂತರ ಆಂಧ್ರಪ್ರದೇಶ ಸೇರಿದಂತೆ 16 ರಾಜ್ಯಗಳ ವಿವಿಧ ಇಲಾಖೆಗಳ ಒಟ್ಟು 25 ಸ್ತಬ್ದ ಚಿತ್ರಗಳು ಸಾಗುತ್ತಿವೆ.