ಬೆಂಗಳೂರು : ಸತೀಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ, ಇದು ಸಿದ್ದರಾಮಯ್ಯ ಸರ್ಕಾರದ ಅವಸಾನದ ಆರಂಭ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ರಾಜೀನಾಮೆಯಿಂದ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾದಂತಾಗಿದೆ ಎಂದರು.
ಜಾರಕಿಹೊಳಿ ರಾಜೀನಾಮೆ ವಾಪಸ್ ಪಡೆಯುಂತೆ ಪೊಲೀಸ್ ಅಧಿಕಾರಿಗಳಿಂದ ಮನವೊಲಿಸುವ ಯತ್ನ ನಡೆಯುತ್ತಿದೆ ಎನ್ನಲಾಗುತ್ತಿದೆ. ಇದು ದಿವಾಳಿತನದ ಪರಮಾವಧಿ. ಎಲ್ಲವನ್ನು ಗಮನಿಸಿದರೆ ಸರ್ಕಾರದ ಬೌದ್ಧಿಕ ದಿವಾಳಿತನ ಎಂಬುದನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.
ಜಾರಕಿಹೊಳಿ ರಾಜೀನಾಮೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ 2ನೇ ವಿಕೆಟ್ ಬಿದ್ದಿದೆ. ಸಿಎಂ ಸಂಪುಟ ಇನ್ನಷ್ಟು ಖಾಲಿಯಾಗುವ ಬಗ್ಗೆ ನಮಗೆ ಮಾಹಿತಿಯಿದೆ ಎಂದು ತಿಳಿಸಿದರು.
ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಬಿಜೆಪಿಯಲ್ಲಿ ಭಿನ್ನಾಭಿಪ್ಯಾಯವಿಲ್ಲ. ಸಿಎಂ ವಿರುದ್ಧ ದೂರಿಗೆ ಬಿಜೆಪಿ ಶಾಸಕರು ಯಾವುದೇ ರೀತಿಯ ವಿರೋಧ ವ್ಯಕ್ತಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಜ್ಯಪಾಲರು ಸಮಯ ನೀಡಿದಾಗ ನಟರಾಜ್ ಶರ್ಮಾರಿಂದ ಸಿಎಂ ವಿರುದ್ಧ ದೂರು ನೀಡಲಾಗುವುದು ಎಂದರು.