Untitled Document
Sign Up | Login    
Dynamic website and Portals
  
January 28, 2015

ರಾಜೀನಾಮೆ ವಾಪಸ್ ಪಡೆಯಲ್ಲ: ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ ಸತೀಶ್ ಜಾರಕಿಹೊಳಿ

ಗೋಕಾಕ್ : ನಾನು ನನ್ನ ರಾಜೀನಾಮೆಗೆ ಬದ್ಧನಾಗಿದ್ದೇನೆ. ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಗೋಕಾಕ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನನ್ನ ರಾಜೀನಾಮೆಯಿಂದ ಪಕ್ಷಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಮುಜುಗರವಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ ನನಗೆ ಉದ್ದೇಶವಿಲ್ಲ ಎಂದರು.

ಹೆಚ್.ಸಿ ಮಹದೇವಪ್ಪ, ಡಿ.ಕೆ.ಶಿವಕುಮಾರ್ ಜತೆ ಚರ್ಚೆ ನಡೆಸಿದ್ದೇನೆ.
ನನ್ನಿಂದ ಯ್ಯಾರಿಗೂ ತೊಂದರೆಯಾಗುವುದು ಬೇಡ ಎಂದು ತಿಳಿಸಿದರು.ಪ್ರಕಾಶ್ ಹುಕ್ಕೇರಿ ಸೇರಿ ಹಲವರು ಮನವೊಲಿಕೆ ಯತ್ನ ಮಾಡಿದ್ದಾರೆ. ಆದರೆ ನನ್ನ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ನನ್ನ ನಿರ್ಧಾರ ಅಚಲ. ರಾಜೀನಾಮೆ ವಾಪಸ್ ಪಡೆಯಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿಗೆ ಬರುವಂತೆ ದೂರವಾಣಿಯಲ್ಲಿ ಮಾತನಾಡಿ ಆಹ್ವಾನ ನೀಡಿದ್ದಾರೆ. ನಾಳೆ ಅವರನ್ನು ಭೇಟಿಮಾಡಿ ಬಳಿಕ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited