ನವದೆಹಲಿ : ದೆಹಲಿ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದೆಹಲಿ ಬಿಜೆಪಿ, ಆಮ್ ಆದ್ಮಿಯ ನೇತಾರ ಅರವಿಂದ ಕೇಜ್ರಿವಾಲ್ ಅವರಿಗೆ ಮತ್ತೆ 5 ಪ್ರಶ್ನೆಗಳನ್ನು ಮುಂದಿಟ್ಟಿದೆ.
ತಾವು ಪದೇ ಪದೇ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿ ಸುತ್ತಿರುವುದೇಕೆ? ನಿಮಗೆ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಗೌರವವಿಲ್ಲವೇ ಎಂದು ಕೇಳಿದೆ.
ಅಲ್ಲದೇ 49 ದಿನಗಳ ಎಎಪಿ ಆಡಳಿತದಲ್ಲಿ ನೀವೆಷ್ಟು ಬಾರಿ ಲೋಕಾಯುಕ್ತವನ್ನು ಬಲಪಡಿಸುವ ವಿಚಾರ ಎತ್ತಿದ್ದೀರಿ? ಚುನಾವಣಾ ಪ್ರಚಾರಕ್ಕೆ ಬೇರೆ ಕಡೆಯಿಂದ ಜನರನ್ನು ಕರೆತರುವುದೇಕೆ? ಈ ಕುರಿತಂತೆ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಮಾಡಿದ ಖರ್ಚುವೆಚ್ಚಗಳ ಬಗ್ಗೆ ಚುನಾವಣಾ ಆಯೋಗಕ್ಕೇಕೆ ಮಾಹಿತಿ ನೀಡಿಲ್ಲ ಎಂದು ಬಿಜೆಪಿ ಕೇಳಿದೆ.