Untitled Document
Sign Up | Login    
Dynamic website and Portals
  
February 1, 2015

ಅಭಿವೃದ್ಧಿ ಬೇಕೆಂದರೆ ಕಾಂಗ್ರೆಸ್ ಗೆ ಮತ ನೀಡಿ: ಸೋನಿಯಾ ಗಾಂಧಿ

ಸೋನಿಯಾ ಗಾಂಧಿ ಸೋನಿಯಾ ಗಾಂಧಿ

ನವದೆಹಲಿ : ದೆಹಲಿಯಲ್ಲಿ ಅಭಿವೃದ್ಧಿ ವಾತಾವರಣೆ ನಿರ್ಮಾಣವಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಪುನಃ ಅಧಿಕಾರಕ್ಕೆ ತನ್ನಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆ ನೀಡಿದ್ದಾರೆ.

ಫೆ.7ರಂದು ದೆಹಲಿ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ಬಿಜೆಪಿ ಮತ್ತು ಎಎಪಿ ಪಕ್ಷಗಳು ತಾವು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತನ್ನಿ ಎಂದರು.

ಇದೇ ವೇಳೆ, ಬಿಜೆಪಿ ನೇತೃತ್ವದ ಎನ್‌.ಡಿ.ಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೇಂದ್ರ ಸರ್ಕಾರ ರೈತ ವಿರೋಧಿಯಾಗಿದ್ದು, ಹಿಂದಿನ ಯುಪಿಎ ಸರ್ಕಾರ ರಚಿಸಿದ್ದ ಭೂಸ್ವಾಧೀನ ಕಾನೂನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು.

ಪ್ರಸ್ತುತ ರೈತರು ತಮ್ಮ ಬೆಳೆಗಳಿಗೆ ಗೊಬ್ಬರ ಮತ್ತು ಬೀಜಗಳನ್ನು ಪಡೆಯಲು ಹೋರಾಟ ಮಾಡಬೇಕಾಗಿದೆ. ನಾವು ದೇಶದ ಬಡವರ ಉದ್ಧಾರಕ್ಕಾಗಿ ಅನೇಕ ಕ್ರಮಗಳನ್ನು ತೆಗೆದುಕೊಂಡಿದ್ದೇವು. ಆದರೆ ಮೋದಿ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳಿಂದ ಬಡವರು ದುರ್ಬಲರಾಗುತ್ತಿದ್ದಾರೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜನತೆ ತಮಗೆ ನೀಡಿದ್ದ ಮುಖ್ಯಮಂತ್ರಿ ಪದವಿಯನ್ನು ಸಕ್ರಿಯವಾಗಿ ನಿರ್ವಹಿಸದೆ ಕೇವಲ ಒಂದುವರೆ ತಿಂಗಳಲ್ಲೇ ಜವಾಬ್ದಾರಿಯಿಂದ ಹಿಂದೆ ಸರಿದಿದ್ದರು ಎಂದು ಆರೋಪಿಸಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited