ಮುಂಬೈ : ರಿಯಲ್ ಎಸ್ಟೇಟ್ ಎಜೆಂಟ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಕ್ಬಾಲ್ ಕಸ್ಕರ್ ಕಳೆದ ಶುಕ್ರವಾರ ಮೂರು ಲಕ್ಷ ನೀಡುವಂತೆ ಬೇಡಿಕೆ ಇಟ್ಟಿದ್ದ ಹಣ ನೀಡದ ಹಿನ್ನೆಲೆಯಲ್ಲಿ ನನ್ನ ಮೇಲೆ ಕಸ್ಕರ್ ಹಲ್ಲೆ ಮಾಡಿದ್ದಾನೆ ಎಂದು ಮುಂಬೈನ ಬೈಕುಲಾ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಗಾಗಿದ್ದ ರಿಯಲ್ ಎಸ್ಟೇಟ್ ಎಜೆಂಟ್ ಸಲೀಂ ಶೇಕ್ ಎಂಬಾತ ದೂರು ದಾಖಲಿಸಿದ್ದ.
ಈ ಸಂಬಂಧ ಇಕ್ಬಾಲ್ ಕಸ್ಕರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇಕ್ಬಾಲ್ ಕಸ್ಕರ್ ಸೇರಿದಂತೆ ಮತ್ತಿಬ್ಬರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.