ನವದೆಹಲಿ : ಮಾಜಿ ಐಪಿಎಸ್ ಅಧಿಕಾರಿ, ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ ಚುನಾವಣಾ ರ್ಯಾಲಿ ವೇಳೆ ಜನರೆದುರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಕೃಷ್ಣಾನಗರ ವಿಧಾನಸಭಾ ಕ್ಷೇತ್ರದಲ್ಲಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿದ್ದ ವೇಳೆ ಜನರ ಪ್ರೀತಿ ಕಂಡು ಭಾವುಕರಾದ ಬೇಡಿ ಕಣ್ಣೀರಿಟ್ಟರು.
ಜನರ ಪ್ರೀತಿ ವಿಶ್ವಾಸಕ್ಕೆ ನಾನು ಚಿರರುಣಿ. ನಿಮ್ಮ ಪ್ರೀತಿಯನ್ನು ವರ್ಣಿಸಲು ನನಗೆ ಪದಗಳು ಸಿಗುತ್ತಿಲ್ಲ, ನಿಮ್ಮ ಪ್ರೀತಿ ಉಳಿಸಿಕೊಳ್ಳಲು ನನ್ನ ಗರಿಷ್ಠ ಪ್ರಯತ್ನ ಮಾಡುತ್ತೇನೆ,ವಿಧೇಯಳಾಗಿ ನಿಮ್ಮ ಸೇವೆ ಮಾಡುತ್ತೇನೆ. ನಿಮ್ಮ ಪ್ರೀತಿಯನ್ನು ಅಭಿವೃದ್ಧಿ ರೂಪದಲ್ಲಿ ಹಿಂದಿರುಗಿಸುವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮೀಮ್ ಫಜಲ್, ಸೋಲಿನ ಭೀತಿಯಿಂದ ಬೇಡಿ ಕಣ್ಣೀರಿಟ್ಟಿದ್ದಾರೆ ಎಂದು ವ್ಯಂಗ್ಯ ವಾಡಿದ್ದಾರೆ.