Untitled Document
Sign Up | Login    
Dynamic website and Portals
  
February 8, 2015

ದೆಹಲಿ ಚುನಾವಣೆ: ಪಕ್ಷ ಸೋತರೆ ತಾನೇ ಹೊಣೆ- ಕಿರಣ್ ಬೇಡಿ

ಕಿರಣ್ ಬೇಡಿ ಕಿರಣ್ ಬೇಡಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎಂದು ಸಿಎಂ ಅಭ್ಯರ್ಥಿ ಕಿರಣ್ ಬೇಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಮಾತನಾದಿದ ಅವರು, ಫೆ .10ರಂದು ಪ್ರಕಟವಾಗಲಿರುವ ಫಲಿತಾಂಶ ಬಿಜೆಪಿ ಪರವಾಗಿ ಬರಲಿದೆ ಎನ್ನುವುದು ನನ್ನ ಭಾವನೆ. ಒಂದು ವೇಳೆ ಬಿಜೆಪಿಯೇನಾದರೂ ಸೋತರೆ ಅದರ ಹೊಣೆಯನ್ನು ತಾನೇ ವಹಿಸಿಕೊಳ್ಳುವುದಾಗಿ ತಿಳಿಸಿದ್ದಾರೆ.

ಮತದಾನೋತ್ತರ ಸಮೀಕ್ಷೆಗಳು ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನೇತ್ರತ್ವದ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿರುವ ಬೆನ್ನಲ್ಲೇ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಕಿರಣ್ ಬೇಡಿ ಮಾತ್ರ ಫಲಿತಾಂಶ ಪ್ರಕಟವಾಗುವವರೆಗೆ ಕಾದುನೋಡಲು ನಿರ್ಧರಿಸಿದ್ದಾರೆ.

ಈ ಮಧ್ಯೆ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಪ್ರಮುಖ ಪ್ರತಿಸ್ಪರ್ಧಿ ಯಾಗಿದೆ. ಜತೆಗೆ, ಸಂಕಷ್ಟದ ದಿನಗಳಿಂದ ಕಾಂಗ್ರೆಸ್ ಹೊರಬರಲಿದೆ ಎಂಬ ವಿಶ್ವಾಸವನ್ನೂ ಪ್ರಿಯಾಂಕ ಗಾಂಧಿ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಈ ಹಿಂದೆ ಸಂಕಷ್ಟದ ದಿನಗಳನ್ನು ಎದುರಿಸಿದೆ. ಈ ಹಿಂದೆಯೂ ಪಕ್ಷ ಇಂಥ ಸ್ಥಿತಿಯಿಂದ ಯಶಸ್ವಿಯಾಗಿ ಹೊರಬಂದಿದೆ. ಈ ಬಾರಿಯೂ ಪಕ್ಷ ಅದೇ ರೀತಿ ಸಂಕಷ್ಟಗಳಿಂದ ಹೊರಬಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited