ನವದೆಹಲಿ : 'ದೆಹಲಿ' ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಶೂನ್ಯ ಸಾಧನೆ ಮಾಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ದೆಹಲಿ ರಾಜ್ಯದ ಮುಖ್ಯಸ್ಥರಾದ ಅರವಿಂದರ್ ಸಿಂಗ್ ಲೌವ್ಲಿ ಕೂಡಾ ರಾಜೀನಾಮೆ ನೀಡಿದ್ದಾರೆ. ದೆಹಲಿ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಗೆ ಒಂದೂ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಪಕ್ಷಕ್ಕೆ ತೀವ್ರ ಮುಖಭಂಗ ಉಂಟಾಗಿದೆ. ರಾಷ್ಟ್ರೀಯ ಪಕ್ಷವಾಗಿದ್ದರೂ ಸಹ ಕಾಂಗ್ರೆಸ್ ಗೆ ಒಂದೇ ಒಂದೂ ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ. ಅಜಯ್ ಮಕೇನ್ ದೆಹಲಿ ಚುನಾವಣಾ ಪ್ರಚಾರ ಮುಖ್ಯಸ್ಥರೂ ಆಗಿದ್ದರಿಂದ ವಯಕ್ತಿಕವಾಗಿಯೂ ಅವರಿಗೆ ಮುಖಭಂಗ ಉಂಟಾಗಿದೆ.
ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಆಮ್ ಆದ್ಮಿ ಪಕ್ಷ 64 ಸ್ಥಾನಗಳನ್ನು ಗಳಿಸಿ ಸ್ಪಷ್ಟ ಬಹುಮತಪಡೆದಿದ್ದರೆ ಬಿಜೆಪಿ ಕೇವಲ ಮೂರು ಸ್ಥಾನ ಪಡೆದು ವಿಪಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಇನ್ನು ಕಾಂಗ್ರೆಸ್ ಪಕ್ಷದ ಯಾವುದೇ ಒಬ್ಬ ಅಭ್ಯರ್ಥಿಯೂ ದೆಹಲಿ ವಿಧಾನಸಭೆ ಪ್ರವೇಶಿಸಲು ಸಾಧ್ಯವಾಗಿಲ್ಲ.