ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 70 ಕ್ಷೇತ್ರಗಳಲ್ಲಿ ಖಾತೆಯನ್ನೇ ತೆರೆಯದೆ ಶೂನ್ಯ ಸ್ಥಾನ ಸಂಪಾದಿಸುವ ಮೂಲಕ ತೀವ್ರ ಮುಖಭಂಗ ಅನುಭವಿಸಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಕ್ಬರ್ ರಸ್ತೆಯಲ್ಲಿರುವ ಪಕ್ಷದ ಕೇಂದ್ರ ಕಚೇರಿ ಮುಂಭಾಗ ಸೇರಿರುವ ಕಾಂಗ್ರೆಸ್ ಕಾರ್ಯಕರ್ತರು, ಪ್ರಿಯಾಂಕ ಕರೆ ತನ್ನಿ ಪಕ್ಷವನ್ನು ಉಳಿಸಿ ಎಂದು ಘೋಷಣೆ ಕೂಗುತ್ತಿದ್ದಾರೆ.
ಸಕ್ರೀಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿಯವರನ್ನು ಕರೆ ತನ್ನಿ ಎಂದು ಆಗ್ರಹಿಸಿರುವ ಪ್ರತಿಭಟನಾಕಾರರು ’ಪ್ರಿಯಾಂಕಾ ಲಾವೋ, ಪಾರ್ಟಿ ಬಚಾವೋ ಎಂದು ಘೋಷಣೆ ಕೂಗುತ್ತಿದ್ದಾರೆ.