Untitled Document
Sign Up | Login    
Dynamic website and Portals
  
February 11, 2015

ಫೆ.14ರಂದು ಕೇಜ್ರಿವಾಲ್ ಪದಗ್ರಹಣ: ಪ್ರಧಾನಿ ಮೋದಿಗೆ ಆಹ್ವಾನ

ಅರವಿಂದ್ ಕೇಜ್ರಿವಾಲ್ ಅರವಿಂದ್ ಕೇಜ್ರಿವಾಲ್

ನವದೆಹಲಿ : ಆಮ್‌ ಆದ್ಮಿ ಪಕ್ಷದ ನೇತಾರ ಅರವಿಂದ್‌ ಕೇಜ್ರಿವಾಲ್‌, ಫೆ.14ರಂದು ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

2015ರ ಹೈವೋಲ್ಟೆಜ್ ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದನ್ನು ನಿರ್ಮಿಸಿದ್ದು, ಕೇಜ್ರಿವಾಲ್ ಸುನಾಮಿ ಅಲೆಯಲ್ಲಿ ಬಿಜೆಪಿ ಕೊಚ್ಚಿಹೋಗಿದೆ. ಕಾಂಗ್ರೆಸ್ ಕೂಡಾ ಧೂಳೀಪಟವಾಗಿದೆ. 70 ಸದಸ್ಯಬಲದ ವಿಧಾನಸಭೆಯಲ್ಲಿ ಎಎಪಿ 67 ಸ್ಥಾನ ಪಡೆದು ಪ್ರಚಂಡ ಜಯಭೇರಿ ಬಾರಿಸಿದೆ. ಬಿಜೆಪಿ ಕೇವಲ 03 ಸ್ಥಾನ ಪಡೆದರೆ, ಕಾಂಗ್ರೆಸ್ ಸಾಧನೆ ಮಾತ್ರ ಈ ಬಾರಿ ಶೂನ್ಯವಾಗಿದೆ.

ಈ ನಿಟ್ಟಿನಲ್ಲಿ ಅರವಿಂದ್ ಕೇಜ್ರಿವಾಲ್ ಫೆ.14ರಂದು ದೆಹಲಿಯ ರಾಮ್‌ ಲೀಲಾ ಮೈದಾನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಗಾಜಿಯಾಬಾದ್‌ನಿಂದ ಮೆರವಣಿಗೆಯಲ್ಲಿ ರಾಮ್‌ಲೀಲಾ ಮೈದಾನಕ್ಕೆ ಆಗಮಿಸುವ ನಿರೀಕ್ಷೆಯಿದೆ.

ಪದಗ್ರಹಣ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಜ್ರಿವಾಲ್ ಆಹ್ವಾನಿಸಿದ್ದಾರೆ. ಅಲ್ಲದೇ ಕೇಂದ್ರದ ಎಲ್ಲಾ ಸಚಿವರನ್ನು ಹಾಗೂ ಕಿರಣ ಬೇಡಿ, ಅಣ್ಣಾ ಹಜಾರೆ ಅವರಿಗೂ ಪ್ರಮಾಣವಚನ ಸಮಾರಂಭಕ್ಕೆ ಬರುವಂತೆ ಆಹ್ವಾನಿಸಲಾಗಿದೆ.

ವಿಶೇಷವೆಂದರೆ ಕಳೆದ ವರ್ಷ ಅಂದರೆ 2014ರ ಫೆ.14ರಂದೇ ಕೇಜ್ರಿವಾಲ್, ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈ ಬಾರಿ ಕೇಜ್ರಿವಾಲ್‌ ನವದೆಹಲಿ ಕ್ಷೇತ್ರದಲ್ಲಿ ಬಿಜೆಪಿಯ ನೂಪುರ್‌ ಶರ್ಮಾ ವಿರುದ್ಧ 31,583 ಮತಗಳ ಭಾರೀ ಅಂತರದಿಂದ ಜಯ ಸಾಧಿಸಿದ್ದಾರೆ. ಈ ಹಿಂದಿನ ಬಾರಿ ಕೂಡಾ ಕೇಜ್ರಿವಾಲ್‌ ರಾಮ್‌ಲೀಲಾ ಮೈದಾನದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited