Untitled Document
Sign Up | Login    
Dynamic website and Portals
  
February 16, 2015

ಭಾರತ-ಶ್ರೀಲಂಕಾ ನಾಲ್ಕು ಮಹತ್ವದ ಒಪ್ಪಂದಕ್ಕೆ ಸಹಿ

ಭಾರತ-ಶ್ರೀಲಂಕಾ ನಾಲ್ಕು ಮಹತ್ವದ ಒಪ್ಪಂದಕ್ಕೆ ಸಹಿ

ನವದೆಹಲಿ : ನಾಗರಿಕ ಪರಮಾಣು ಒಪ್ಪಂದ ಸೇರಿ ಭಾರತ-ಶ್ರೀಲಂಕಾ ಮಹತ್ವದ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಿವೆ.

ಶ್ರೀಲಂಕಾ ಅಧ್ಯಕ್ಷರಾಗಿ ಚುನಾಯಿತರಾದ ಬಳಿಕ ಮೈತ್ರಿಪಾಲ ಸಿರಿಸೇನಾ ಅವರು ತಮ್ಮ ಮೊದಲ ಭಾರತ ಪ್ರವಾಸವನ್ನು ಆರಂಭಿಸಿದ್ದು, ನಾಲ್ಕು ದಿನಗಳ ಭೇಟಿಗಾಗಿ ಆಗಮಿಸಿರುವ ಅವರು, ಪ್ರಧಾನಿ ಮೋದಿ ಅವರ ಜತೆ ಸಮಗ್ರ ಆರ್ಥಿಕ ಸಹಕಾರ ಹೆಚ್ಚಳದ ಕುರಿತು ಚರ್ಚೆ ನಡೆಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಸಿರಿಸೇನಾ ಮಹತ್ವದ ದ್ವಿಪಕ್ಷೀಯ ನಾಗರಿಕ ಅಣು ಸಹಕಾರ, ಸಂಸ್ಕೃತಿ ಮತ್ತು ಕೃಷಿ ಕ್ಷೇತ್ರಗಳಲ್ಲಿ ಸಹಕಾರ ಸೇರಿದಂತೆ ಹಲವು ರಕ್ಷಣಾತ್ಮಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು.

ಈ ಕುರಿತು ಮಾತನಾಡಿದ ವಿದೇಶಾಂಗ ಖಾತೆ ವಕ್ತಾರ ಸಯ್ಯದ್‌ ಅಕ್ಬರುದ್ದೀನ್‌, ಆರ್ಥಿಕ ಬಾಂಧವ್ಯಗಳನ್ನು ಮತ್ತಷ್ಟು ಬಲಪಡಿಸುವ ಬಗ್ಗೆ ಭಾರತ-ಲಂಕಾ ನಾಯಕರು ಮಾತುಕತೆನಡೆಸಿದರು. ನಾಲ್ಕು ಪ್ರಮುಖ ಒಪ್ಪಂದಗಳ ಬಗ್ಗೆಯೂ ಚರ್ಚೆ ನಡೆಯಿತು ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಶ್ರೀಲಂಕಾ ಅಧ್ಯಕ್ಷರ ಜತೆ ಮಾತುಕತೆ ನಡೆಸಿದರು. ಬೆಳಿಗ್ಗೆ ಶ್ರೀಲಂಕಾ ಅಧ್ಯಕ್ಷರು, ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಅವರ ಸಮಾಧಿಗೆ ಪುಷ್ಪ ಗುಚ್ಚ ಇರಿಸುವ ಮೂಲಕ ಸೋಮವಾರ ಗೌರವ ಪೂರಕ ನಮನವನ್ನು ಸಲ್ಲಿಸಿದ್ದಾರೆ.

ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ನಂತರ ಸಿರಿಸೇನಾ ನೇರವಾಗಿ ರಾಷ್ಟ್ರಪತಿ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಹಣಕಾಸು, ಶಾಂತಿ ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ದ್ವಿಪಕ್ಷೀಯ ಮಾತುಕತೆ ನಡೆಸಿದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited