ನವದೆಹಲಿ : ಸೋಮವಾರದಿಂದ ಆರಂಭಗೊಂಡಿರುವ ಸಂಸತ್ ಬಜೆಟ್ ಅಧಿವೇಶನದಲ್ಲಿ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಭಾಷಣದಲ್ಲಿ ಹೊಸ ವಿಚಾರಗಳೇನೂ ಇಲ್ಲ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಎಸ್ ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿಯವರ ಭಾಷಣ ಕೇಂದ್ರ ಸರ್ಕಾರದ ಸಾಧನೆಗಳನ್ನು ಪ್ರತಿಬಿಂಬಿಸುವಂತಿತ್ತು. ಒಟ್ಟಾರೆ ಭಾಷಣವು ಕಡಿಮೆ ಕೆಲಸ, ಹೆಚ್ಚು ಮಾತಿಗೆ ಸೀಮಿತವಾಗಿದೆ ಎಂದಿದ್ದಾರೆ.
ಆರಂಭದಿಂದ ನಾನು ಭಾಷಣವನ್ನು ಗಮನವಿಟ್ಟು ಕೇಳಿಸಿಕೊಂಡಿದ್ದೇನೆ ಹಿಂದಿನ ಭಾಷಣದಲ್ಲಿದ್ದುದನ್ನೇ ಬೇರೆ ರೀತಿಯಲ್ಲಿ ಪ್ರಸ್ತುತ ಪಡೆಸಿದ್ದಾರೆ ಎಂದು ತಿಳಿಸಿದರು.
ಆದರೆ, ವಿವಾದಿತ ಭೂಸ್ವಾದೀನ ಕಾಯ್ದೆಯ ಸುಗ್ರೀವಾಜ್ನೆ ಕುರಿತಂತೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿದ ಅವರು ಈ ಕುರಿತು ನಮ್ಮ ಅಂಕಿ ಅಂಶಗಳನ್ನು ಸಂಸತ್ತಿನಲ್ಲಿ ಪ್ರಸ್ತುತ ಪಡಿಸುತ್ತೇವೆ ಎಂದಿದ್ದಾರೆ.
ಕೇಂದ್ರ ಸರ್ಕಾರ ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಗೆ ಬದಲಾವಣೆಗಳನ್ನು ತರುವವರೆಗೂ ನಾವು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸುತ್ತೇವೆ, ಇದು ರೈತರ ಪರವಾಗಿ ಮಾಡಲಾಗಿರುವ ಸುಗ್ರೀವಾಜ್ಞೆ ಅಲ್ಲ ಎಂದರು.
ವಿವಾದಿತ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ವಿರೋಧಿಸಿ ಅಣ್ಣಾ ಹಜಾರೆ ಕೈಗೊಂಡಿರುವ ಸತ್ಯಾಗ್ರಹ ಕುರಿತು ಪ್ರತಿಕ್ರಿಯಿಸಿದ ಅವರು,ರೈತರ ಪರ ಕಾಳಜಿ ಇದಕ್ಕೆ ಕಾರಣ ಎಂದು ಹೇಳಿದರು. ಅಲ್ಲದೇ ಅಣ್ಣಾ ಹಜಾರೆ ಅವರು ಜಂತರ್ ಮಂತರ್ ನಲ್ಲಿ ಸತ್ಯಾಗ್ರಹ ಆರಂಭಿಸುವುದಕ್ಕೂ ಮೊದಲೆ ನಮ್ಮ ಪಕ್ಷ ರೈತ ವಿರೋಧಿ ಸುಗ್ರೀವಾಜ್ಞೆಗೆ ವಿರೋಧ ವ್ಯಕ್ತಪಡಿಸಿದೆ ಎಂದೂ ತಿಳಿಸಿದರು.