Untitled Document
Sign Up | Login    
Dynamic website and Portals
  
February 24, 2015

ಭೂಸ್ವಾಧೀನ ಕಾಯ್ದೆಯಲ್ಲಿ ಯಾವುದೇ ದೋಷವಿಲ್ಲ: ಅರುಣ್ ಜೇಟ್ಲಿ

ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ

ನವದೆಹಲಿ : ಕೇಂದ್ರ ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸತ್ ನ ಉಭಯ ಸದನಗಳು ತೀವ್ರ ಗದ್ದಲಕ್ಕೆ ಸಾಕ್ಷಿಯಾದವು. ಮಸೂದೆ ಕುರಿತು ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಕೋಲಾಹಲವೆಬ್ಬಿಸಿದವು.

ರಾಜ್ಯಸಭೆಯಲ್ಲಿ ಸರ್ಕಾರದ ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿಕೊಂಡ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ, ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವುದು ಅಸಂವಿಧಾನಿಕವಲ್ಲ ಎಂದಿದ್ದಾರೆ.

ರಾಜ್ಯಸಭೆಯಲ್ಲಿ ಜೆಡಿಯುನ ಶರದ್ ಯಾದವ್ ಅವರ ಪ್ರಶ್ನೆಗೆ ಉತ್ತರಿಸಿದ ಉತ್ತರಿಸಿದ ಜೇಟ್ಲಿ, ಭೂಸ್ವಾಧೀನ ಕಾಯ್ದೆಯ ಕಲಂ 10(ಎ)ಗೆ ಸರ್ಕಾರ ತಿದ್ದುಪಡಿ ತಂದಿದ್ದು, ಈ ಕಾಯ್ದೆಯಲ್ಲಿ ಯಾವುದೇ ದೋಷಗಳಿಲ್ಲ ಎಂದು ತಿಳಿಸಿದರು.

ಇದೇ ವೇಳೆ, ಎನ್‌.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲೇ ಹಲವು ಸುಗ್ರೀವಾಜ್ಞೆಗಳನ್ನು ಹೊರಡಿಸುವ ಮೂಲಕ ಸಂಸತ್‌ ನ್ನು ರಬ್ಬರ್ ಸ್ಟಾಂಪ್ ಆಗಿ ಮಾಡಲು ಹೊರಟಿದ್ದೀರಿ ಎಂಬ ಕಾಂಗ್ರೆಸ್‌ ನ ಆನಂದ್ ಶರ್ಮಾ ಅವರ ಆರೋಪಕ್ಕೆ ಪ್ರತಿಕ್ರಿಸಿದ ಜೇಟ್ಲಿ, ಸುಗ್ರೀವಾಜ್ಞೆ ಹೊರಡಿಸುವುದು ಅಸಂವಿಧಾನಿಕ ಅಲ್ಲ ಮತ್ತು ಯುಪಿಎ ಸರ್ಕಾರ ಸಹ ಸುಮಾರು 70ಕ್ಕೂ ಹೆಚ್ಚು ಸುಗ್ರೀವಾಜ್ಞೆಗಳನ್ನು ಹೊರಡಿಸಿದೆ. ಹೀಗಿರುವಾಗ ನಾವು ಸಂವಿಧಾನದ ಪ್ರಕಾರವೇ ಸುಗ್ರೀವಾಜ್ನೆ ಹೊರಡಿಸಿರುವುದಾಗಿ ಹೇಳಿದರು.

ಅರುಣ್ ಜೇಟ್ಲಿ ಹೇಳಿಕೆಗೆ ಕಾಂಗ್ರೆಸ್ ಮುಖಂಡರು ಸೇರಿದಂತೆ ವಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿದರು.

ಲೋಕಸಭೆಯಲ್ಲಿಯೂ ಇದೇ ಪರಿಸ್ಥಿತಿ ಮುಂದುವರೆದಿದ್ದು, ಭೂಸ್ವಾಧೀನ ಕಾಯ್ದೆಗೆ ಸುಗ್ರೀವಾಜ್ನೆ ಜಾರಿಗೊಳಿಸಿರುವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳು ಆಡಳಿತ ಪಕ್ಷವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited