ಬೆಂಗಳೂರು : 'ಮಾರ್ಚ್' ನಲ್ಲಿ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಗುವ ಹಿನ್ನೆಲೆಯಲ್ಲಿ ಫೆ.24ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಪಾಲ್ಗೊಂಡಿದ್ದ ಕೋಡಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ರೈತ ಮುಖಂಡರು ಸರ್ಕಾರಕ್ಕೆ ಬೆಡಿಕೆಗಳನ್ನು ಮುಂದಿಟ್ಟಿದ್ದು, ಬಜೆಟ್ ನಲ್ಲಿ ಈಡೇರಿಸಬೇಕಾದ ಅಂಶಗಳ ಬಗ್ಗೆ ಪ್ರಸ್ತಾಪಿಸಿರುವ ರೈತ ಮುಖಂಡರು, ಕಬ್ಬುಬೆಳೆಗಾರರಿಗೆ ನೀಡಬೇಕಿರುವ 1600ಕೋಟಿ ಬಾಕಿ ಹಣವನ್ನು ನೀಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಲ್ಲದೇ ರೈತರಿಗೆ ಆದಾಯ ಖಾತ್ರಿ ಭದ್ರತೆ ಜಾರಿಗೆ ತಂದು ರೈತರು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿ ಪಾಲ್ಗೊಂಡ ಮುಖಂಡರು ಆಗ್ರಹಿಸಿದ್ದಾರೆ.
ಇದೆ ವೇಳೆ ಕೃಷಿ ಬಜೆಟ್ ಬಗ್ಗೆಯೂ ಬೇಡಿಕೆ ಸಲ್ಲಿಸಿರುವ ರೈತ ಮುಖಂಡರು ಬಜೆಟ್ ನಲ್ಲಿ ಕೃಷಿಗೆ 40 ಸಾವಿರ ಕೋಟಿ ರೂಪಾಯಿ ನೀಡಬೇಕೆಂದು ಸಿ.ಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದು ಕೃಷಿ ಯಂತ್ರ ಬಾಡಿಗೆ ಯೋಜನೆ ವಿಸ್ತರಣೆ ಮಾಡಬೇಕೆಂದು ಹೇಳಿದ್ದಾರೆ.
ರಾಜ್ಯದ 2015-16ನೇ ಸಾಲಿನ ಬಜೆಟ್ ಅಧಿವೇಶನ ಮಾರ್ಚ್ ನಲ್ಲಿ ಪ್ರಾರಂಭವಾಗಲಿದ್ದು, ಸಿ.ಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಆಯ-ವ್ಯಯ ಮಂಡನೆ ಮಾಡಲಿದ್ದಾರೆ.