Untitled Document
Sign Up | Login    
Dynamic website and Portals
  
February 28, 2015

ಬಜೆಟ್ ಗೆ ಪ್ರಧಾನಿ ಮೋದಿ ಮೆಚ್ಚುಗೆ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ : ವಿತ್ತ ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್ ಸ್ಪಷ್ಟ ದೃಷ್ಟಿಕೋನ, ಪ್ರಗತಿಪರ, ಸಕಾರಾತ್ಮಕ ಮತ್ತು ಅಭಿವೃದ್ಧಿಶೀಲವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಜೆಟ್ ಮಂಡನೆಯ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಯುವಕರು, ರೈತರು, ಬಡವರು, ಮಧ್ಯಮ ವರ್ಗ, ಸಾಮಾನ್ಯ ನಾಗರಿಕರನ್ನು ದೃಷ್ಟಿಯಲ್ಲಿಟ್ಟುಕೊಂಡು ಅಭಿವೃದ್ಧಿಗೆ ಬಜೆಟ್‌ ನಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಲಾಗಿದೆ ಎಂದರು.

ಬಜೆಟ್ ಹೂಡಿಕೆದಾರರ ಪರವಾಗಿದ್ದು, ತೆರಿಗೆ ಸಂಬಂಧಿಸಿದ ಎಲ್ಲ ಗೊಂದಲಗಳನ್ನು ನಿವಾರಿಸಿದೆ. ಕಾಲಮಿತಿಯ ಹೂಡಿಕೆದಾರರ ಪರವಾದ ತೆರಿಗೆ ಪದ್ಧತಿ ರೂಪಿಸುವ ಭರವಸೆಗಳನ್ನು ಬಜೆಟ್‌ ನಲ್ಲಿ ನೀಡಲಾಗಿದೆ ಎಂದು ತಿಳಿಸಿದರು.

ಎಲ್ಲರಿಗೂ ಮನೆ, ಉದ್ಯೋಗ, ಆರೋಗ್ಯ, ಶಿಕ್ಷಣ, ಸಂಪೂರ್ಣ ವಿದ್ಯುದೀಕರಣ ಗುರಿ ನಿಗದಿಪಡಿಸಿ 2022ರ ಸ್ವತಂತ್ರ ಅಮೃತಮಹೋತ್ಸವಕ್ಕೆ ಇದನ್ನು ಸಾಧಿಸುವ ಸಂಕಲ್ಪ ಮಾಡಲಾಗಿದೆ ಎಂದು ಶ್ಲಾಘಿಸಿದರು.

ರಾಜ್ಯಗಳ ಹಾಗೂ ದೇಶದ ಜನರ ನಿರೀಕ್ಷೆಗಳನ್ನು ಈಡೇರಿಸುವ ಬಜೆಟ್ ಮಂಡಿಸಿದ್ದಕ್ಕಾಗಿ ಅರುಣ್ ಜೇಟ್ಲಿಯವರನ್ನು ಅಭಿನಂದಿಸುವುದಾಗಿ ಹೇಳಿದ ಪ್ರಧಾನಿ ಮೋದಿ, ಬಡಜನರ ಘನತೆಯ ಜೀವನಕ್ಕಾಗಿ ನಾನಾ ಯೋಜನೆಗಳನ್ನು ರೂಪಿಸಲಾಗಿದೆ. ವಿದೇಶದಲ್ಲಿರುವ ಪ್ರತಿ ಪೈಸೆ ಕಪ್ಪು ಹಣವನ್ನು ಭಾರತಕ್ಕೆ ತರುವ ನಮ್ಮ ಸಂಕಲ್ಪದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇದಕ್ಕಾಗಿ ವಿಶೇಷ ಕಾನೂನು ರೂಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited