Untitled Document
Sign Up | Login    
Dynamic website and Portals
  
March 2, 2015

ಆಪ್‌ ನಲ್ಲಿ ಭಿನ್ನಮತ: ಮಾರ್ಚ್‌ 4 ರಂದು ಕಾರ್ಯಕಾರಿಣಿ ಸಭೆ

ಆಪ್‌ ನಲ್ಲಿ ಭಿನ್ನಮತ: ಮಾರ್ಚ್‌ 4 ರಂದು ಕಾರ್ಯಕಾರಿಣಿ ಸಭೆ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದ ಆಮ್‌ ಆದ್ಮಿ ಪಕ್ಷದಲ್ಲಿ ಇದೀಗ ತೀವ್ರ ಭಿನ್ನಮತ ಉಂಟಾಗಿದೆ. ಈ ಹಿನ್ನಲೆಯಲ್ಲಿ ಮಾರ್ಚ್‌ 4 ರಂದು ಪಕ್ಷದ ಕಾರ್ಯಕಾರಿಣಿ ಸಭೆಯನ್ನು ಕರೆಯಲಾಗಿದೆ.

ಆಪ್‌ ವಕ್ತಾರ ಸಂಜಯ್‌ ಸಿಂಗ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಬಿಕ್ಕಟ್ಟಿರುವ ಬಗ್ಗೆ ಒಪ್ಪಿಕೊಂಡಿದ್ದು, ಇದರಿಂದಾಗಿ ಪಕ್ಷದ ವರ್ಚಸ್ಸಿಗೆ ತುಂಬಾ ಹಾನಿಯಾಗಿದೆ ಎಂದು ತಿಳಿಸಿದ್ದಾರೆ.

ಪಕ್ಷದ ಹಿರಿಯ ನಾಯಕರಾದ ಯೋಗೇಂದ್ರ ಯಾದವ್‌ ಮತ್ತು ಪ್ರಶಾಂತ್‌ ಭೂಷಣ್‌ ಅವರು ಅರವಿಂದ್ ಕೇಜ್ರಿವಾಲ್‌ ವಿರುದ್ದ ಕೆಲಸ ಮಾಡಿ ಅವರ ಪದಚ್ಯುತಿಗೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ನೂತನ ರಾಷ್ಟ್ರೀಯ ಸಂಚಾಲಕರ ನೇಮಕ ಮಾಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪ್ರಶಾಂತ್‌ ಭೂಷಣ್‌ ಮತ್ತು ಯಾದವ್‌ ಅವರು ಆಮ್‌ ಆದ್ಮಿ ಪಕ್ಷದ ಕಾರ್ಯದರ್ಶಿಗೆ ಬರೆದ ಪತ್ರಗಳು ಬಹಿರಂಗವಾಗಿದ್ದು, ಪತ್ರದಲ್ಲಿ ಪಕ್ಷದಲ್ಲಿ ಎಲ್ಲವೂ ಏಕಪಕ್ಷಿಯವಾಗಿ ನಡೆಯುತ್ತಿದೆ, ಪಕ್ಷ ಒಬ್ಬ ವ್ಯಕ್ತಿಯದ್ದಾಗುತ್ತಿದೆ ಎಂದು ದೂರಿದ್ದಾರೆ. ಪತ್ರದಲ್ಲಿ ಕೇಜ್ರಿವಾಲ್‌ ಅವರ ಕೆಲ ನಿರ್ಧಾರಗಳನ್ನು ವಿರೋಧಿಸಿ ಬರೆಯಲಾಗಿದೆ .

ಯೋಗೇಂದ್ರ ಯಾದವ್‌ ಮತ್ತು ಪ್ರಶಾಂತ್‌ ಭೂಷಣ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 
The Ultimate Job Portal
Netzume - Resume Website Gou Products

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited