Untitled Document
Sign Up | Login    
Dynamic website and Portals
  
March 6, 2015

ಪಾಕ್‌ ಹೊಗಳುವವರಿಗೆ ಬೂಟಿನಿಂದ ಹೊಡೆಯಬೇಕು: ಸಾಧ್ವಿ ಬಾಲಿಕಾ ಸರಸ್ವತಿ

Mangalore : ಭಾರತದಲ್ಲಿ ವಾಸವಾಗಿದ್ದುಕೊಂಡು ಪಾಕಿಸ್ಥಾನವನ್ನು ಹಾಡಿ ಹೊಗಳುವವರನ್ನು ಬೂಟಿನಿಂದ ಹೊಡೆಯಬೇಕು ಎಂದು ವಿಶ್ವ ಹಿಂದು ಪರಿಷತ್‌ ನಾಯಕಿ ಸಾಧ್ವಿ ಬಾಲಿಕಾ ಸರಸ್ವತಿ ಅವರು ಹೇಳಿರುವ ಮಾತುಗಳು ತೀವ್ರ ವಿವಾದವನ್ನು ಸೃಷ್ಟಿಸಿವೆ.

ಕಳೆದ ಮಾರ್ಚ್‌ 1ರಂದು ಮಂಗಳೂರಿನಲ್ಲಿ ನಡೆದಿದ್ದ ಹಿಂದು ಸಮಾಜೋತ್ಸವದಲ್ಲಿ ಮಾತನಾಡಿದ್ದ ಮಧ್ಯಪ್ರದೇಶದ ಸಾಧ್ವಿ ಬಾಲಿಕಾ ಸರಸ್ವತಿ ಅವರು, ಭಾರತದಲ್ಲಿ ವಾಸವಾಗಿದ್ದುಕೊಂಡು ಪಾಕಿಸ್ಥಾನವನ್ನು ಹಾಡಿ ಹೊಗಳುವವರನ್ನು ಬೂಟಿನಿಂದ ಹೊಡೆಯಬೇಕಲ್ಲದೆ ಅವರನ್ನು ನಿರ್ದಾಕ್ಷಿಣ್ಯವಾಗಿ ಪಾಕಿಸ್ಥಾನಕ್ಕೆ ಅಟ್ಟಬೇಕು ಎಂದು ಅಪ್ಪಣೆ ಮಾಡಿದ್ದರು.

ಸಾಧ್ವಿ ಸರಸ್ವತಿ ಅವರ ಕಿಡಿ ಕಾರುವ ಭಾಷಣದ ಬಹು ಮುಖ್ಯ ವಿವಾದಾತ್ಮಕ ಭಾಗಗಳನ್ನು ಕೂಲಂಕಷವಾಗಿ ನೋಟ್‌ ಮಾಡಿಕೊಂಡಿರುವ ಪೊಲೀಸರು ಆಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

ಹಿಂದುಗಳು ಎರಡು ರಾಮಮಂದಿರಗಳನ್ನು ನಿರ್ಮಿಸಲಿದ್ದಾರೆ. ಮೊದಲನೇಯದ್ದು ಅಯೋಧ್ಯೆಯಲ್ಲಿ, ಎರಡನೇಯದ್ದು ಇಸ್ಲಾಮಾಬಾದ್‌ನಲ್ಲಿ. ಇಸ್ಲಾಮಾಬಾದ್‌ ನಲ್ಲಿ ರಾಮ ಮಂದಿರ ನಿರ್ಮಿಸಿದ ಬಳಿಕ ಭಾರತದಲ್ಲಿರುವ ಹಿಂದುಗಳು ಅಲ್ಲಿಗೆ ಹೋಗಿ ಪೂಜೆ ಮತ್ತು ಅರ್ಚನೆಯನ್ನು ಕೈಗೊಳ್ಳಲಿದ್ದಾರೆ ಎಂದು ಸಾಧ್ವಿ ಹೇಳಿದ್ದರು.

ನಗರ ಪೊಲೀಸ್‌ ಕಮಿಷನರ್ ಎಸ್‌ ಮುರುಗನ್‌ ಹೇಳಿರುವಂತೆ ಸಾಧ್ವಿಯವರ ಭಾಷಣಕ್ಕೆ ಈ ತನಕ ಯಾರಿಂದಲೂ ದೂರು ಬಂದಿಲ್ಲ. ಆದರೆ ಒಂದೊಮ್ಮೆ ಆಕೆಯ ಭಾಷಣದ ವಿವಾದತ್ಮಾಕ ಅಂಶಗಳ ಬಗ್ಗೆ ಯಾರಾದರೂ ದೂರು ಕೊಟ್ಟಲ್ಲಿ ನಾವು ಆಕೆಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕಾತ್ತದೆ ಎಂದು ಹೇಳಿದ್ದಾರೆ.

ಆದರೆ ಈ ಬಗ್ಗೆ ಪೊಲೀಸರು ತಾವೇ ಸ್ವಯಂ ಪ್ರೇರಿತರಾಗಿ ಸಾಧ್ವಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೇ ಎಂಬ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂದು ಮುರುಗನ್‌ ಹೇಳಿದ್ದಾರೆ.

ಲವ್‌ ಜಿಹಾದ್‌ ವಿರುದ್ಧ ಕಿಡಿ ಕಾರಿದ್ದ ಸಾಧ್ವಿ ಬಾಲಿಕಾ ಸರಸ್ವತಿ ಅವರು, ’ನಾವು ಇನ್ನಷ್ಟು ಕಾಲ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವಿನ್ನು ಕಣ್ಣಿಗೆ ಕಣ್ಣನ್ನು ಪಡೆದೇ ತೀರುತ್ತೇವೆ. ಭಾರತವು ಸ್ವಾತಂತ್ರ್ಯವನ್ನು ಶಾಂತಿಯಿಂದ ಪಡೆಯಿತೆನ್ನುವುದನ್ನು ಇತಿಹಾಸವು ನಮಗೆ ತಿಳಿಸುತ್ತದೆ. ಆದರೆ ನಾವು ಅದೇ ಸ್ವಾತಂತ್ರ್ಯವನ್ನು ಶಾಂತಿಯಿಂದ ಉಳಿಸಿಕೊಳ್ಳಲು ಸಾಧ್ಯವಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ. ನಾವು ಅಸ್ತ್ರವನ್ನು ಕೈಗೆತ್ತಿಕೊಳ್ಳಲೇಬೇಕಾಗುವುದು' ಎಂದು ಹೇಳಿದ್ದರು.

 

 

Share this page : 
 

Readers' Comments (0)
Select Language : 
Press F12 to toggle Indian language and English
Your Name : 
Characters Remaining: 5000
 
 

More News From : General

ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಯುದ್ಧ ನೌಕೆ ಐಎನ್‌ಎಸ್‌ ಕಿಲ್ತಾನ್‌ ಲೋಕಾರ್ಪಣೆ
  • ದೇಶಿ ನಿರ್ಮಿತ ಮೂರನೇ ಜಲಾಂತರ್ಗಾಮಿ ನೌಕೆ ಪ್ರಾಜೆಕ್ಟ್‌ 28ರ ಅಡಿಯಲ್ಲಿ ನಿರ್ಮಾಣಗೊಂಡ ಐಎನ್‌ಎಸ್‌ ಕಿಲ್ತಾನ್‌ ನೌಕೆಯನ್ನು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಲೋಕಾರ್ಪಣೆ ಮಾಡಿದರು.
  • ಆರುಷಿ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳು ಖುಲಾಸೆ;ಅಲಹಾಬಾದ್ ಹೈಕೋರ್ಟ್ ತೀರ್ಪು
  • ಅ.12ರ ಮಧ್ಯ ರಾತ್ರಿಯಿಂದ ಪೆಟ್ರೋಲ್ ಬಂಕ್ ಬಂದ್
  • The Ultimate Job Portal
    Netzume - Resume Website Gou Products

    Other News

    Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
    © bangalorewaves. All rights reserved. Developed And Managed by Rishi Systems P. Limited