ಗುವಾಹಟಿ : ಮಸೀದಿಗಳು ಕೇವಲ ಕಟ್ಟಡ ಮಾತ್ರ, ಅದೊಂದು ಧಾರ್ಮಿಕ ಸ್ಥಳವಲ್ಲ. ಹಾಗಾಗಿ ಯಾವುದೇ ಸಮಯದಲ್ಲೂ ಅದನ್ನು ಧ್ವಂಸ ಮಾಡಬಹುದಾಗಿದೆ ಎಂದು ಭಾರತೀಯ ಜನತಾ ಪಕ್ಷದ ಮುಖಂಡ ಸುಬ್ರಮಣ್ಯನ್ ಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಗುವಾಹಟಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸ್ವಾಮಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು, ತನ್ನ ಅಭಿಪ್ರಾಯ ಒಪ್ಪದ ಯಾವುದೇ ವ್ಯಕ್ತಿಯ ಜೊತೆ ಈ ಬಗ್ಗೆ ಚರ್ಚೆಗೂ ಸಿದ್ದ ಎಂದು ಬಹಿರಂಗವಾಗಿ ಸವಾಲು ಹಾಕಿದ್ದಾರೆ.
ಸ್ವಾಮಿ ಹೇಳಿಕೆ ನಂತರ ಸಾಕಷ್ಟು ವಿರೋಧ ಹಾಗೂ ಪ್ರತಿಭಟನೆಗಳು ವ್ಯಕ್ತವಾಗಿದೆ. ಅಷ್ಟೇ ಅಲ್ಲ ಕ್ರಿಷಾಕ್ ಮುಕ್ತಿ ಸಂಗ್ರಾಮ್ ಸಮಿತಿ(ಕೆಎಂಎಸ್ಎಸ್) ಸ್ವಾಮಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದೆ.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮುಖಂಡ ಸ್ವಾಮಿ ಕೋಮು ದ್ವೇಷವನ್ನು ಹರಡುತ್ತಿದ್ದಾರೆ ಎಂದು ಸಮಿತಿ ಗಂಭೀರವಾಗಿ ಆರೋಪಿಸಿದೆ.